ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಬಾರದ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ ಅಸಮಾಧಾನ!

ಅರುಣ್​ ಕುಮಾರ್​ ಬೆಳ್ಳಿ

Updated on: Aug 28, 2023 | 6:08 PM

ಮೂಲಗಳ ಪ್ರಕಾರ ಅವರು ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿಗೆ ತೆರಳಿದ್ದರಂತೆ. ಅವರ ವರ್ತನೆಯಿಂದ ಸಹನೆ ಕಳೆದುಕೊಂಡ ಪ್ರಜ್ವಲ್ ಕಚೇರಿಯೊಳಗೆ ಹೋಗಿ ಅಲ್ಲಿದ್ದ ಬೇರೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪಾಪ, ಜಿಲ್ಲಧಿಕಾರಿಗಳ ಕಚೇರಿ ಸಿಬ್ಬಂದಿಯಾದರೂ ಏನು ಮಾಡಿಯಾರು? ಅವರೊಂದಿಗೆ ಕೋಪದಲ್ಲಿ ಮಾತಾಡಿ, ಹೊರಬಂದ ಪ್ರಜ್ವಲ್ ಪ್ರತಿಭಟನೆ ಮುಂದುವರಿಸಿದರು.

ಹಾಸನ: ಹೆಚ್ ಡಿ ರೇವಣ್ಣ (HD Revanna) ಕುಟುಂಬ ಮತ್ತು ಹಾಸನ ಜಿಲ್ಲೆಯ ಅಧಿಕಾರಿಗಳ ನಡುವೆ ಎಣ್ಣೆ-ಸೀಗೇಕಾಯಿ ಸಂಬಂಧ ಇರುವಂತಿದೆ. ರೇವಣ್ಣ ಅವರು ಅಧಿಕಾರಿಗಳ ಮೇಲೆ ರೇಗಾಡುತ್ತಿರುತ್ತಾರೆ. ಇವತ್ತು ಅವರ ಮಗ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮಾ (Satyabhama C) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸನ್ನಿವೇಶ ಸೃಷ್ಟಿಯಾಯಿತು. ವಿಷಯವೇನೆಂದರೆ, ಪ್ರಜ್ವಲ್ ಸಾರ್ವಜನಿಕರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ಶುರುವಾಗಿ ಸಾಕಟ್ಟು ಸಮಯ ಕಳೆದರೂ ಜಿಲ್ಲಾಧಿಕಾರಿ ಸತ್ಯಭಾಮ ಪ್ರತಿಭಟನೆಕಾರರಿಂದ ಮನವಿ ಪತ್ರ ಸ್ವೀಕರಿಸಲು ಬರಲಿಲ್ಲ. ಮೂಲಗಳ ಪ್ರಕಾರ ಅವರು ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿಗೆ ತೆರಳಿದ್ದರಂತೆ. ಅವರ ವರ್ತನೆಯಿಂದ ಸಹನೆ ಕಳೆದುಕೊಂಡ ಪ್ರಜ್ವಲ್ ಕಚೇರಿಯೊಳಗೆ ಹೋಗಿ ಅಲ್ಲಿದ್ದ ಬೇರೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪಾಪ, ಜಿಲ್ಲಧಿಕಾರಿಗಳ ಕಚೇರಿ ಸಿಬ್ಬಂದಿಯಾದರೂ ಏನು ಮಾಡಿಯಾರು? ಅವರೊಂದಿಗೆ ಕೋಪದಲ್ಲಿ ಮಾತಾಡಿ, ಹೊರಬಂದ ಪ್ರಜ್ವಲ್ ಪ್ರತಿಭಟನೆ ಮುಂದುವರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.