ರಜೆ ಮುಗಿಸಿ ಬೆಂಗಳೂರಿಗೆ ಬರ್ತಿರೋ ಜನರು; ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಫುಲ್​ ಜಾಮ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Jan 28, 2024 | 7:26 PM

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಜನರು ತಮ್ಮೂರುಗಳಿಗೆ ತೆರಳಿದ್ದರು. ಈಗ ನಾಳೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಬೇಕಾಗಿರುವುದರಿಂದ ಎಲ್ಲರೂ ತಮ್ಮ ತಮ್ಮ ಊರುಗಳಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇದರಿಂದ ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ75ರಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್​ ಜಾಮ್(Traffic Jam) ಉಂಟಾಗಿದೆ.

ಬೆಂಗಳೂರು ಗ್ರಾಮಾಂತರ, ಜ.28: ಶುಕ್ರವಾರ ಗಣರಾಜ್ಯೋತ್ಸವ, ಶನಿವಾರ ಹಾಗೂ ಭಾನುವಾರ ಮೂರು ದಿನಗಳ ಕಾಲ ರಜೆ ಇದ್ದ ಕಾರಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಜನರು ತಮ್ಮೂರುಗಳಿಗೆ ತೆರಳಿದ್ದರು. ಈಗ ನಾಳೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಬೇಕಾಗಿರುವುದರಿಂದ ಎಲ್ಲರೂ ತಮ್ಮ ತಮ್ಮ ಊರುಗಳಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇದರಿಂದ ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ75ರಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್​ ಜಾಮ್(Traffic Jam) ಉಂಟಾಗಿದೆ. ಇದರ ಜೊತೆಗೆ ಟ್ರಾಫಿಕ್ ನಿಯಂತ್ರಣ ಮಾಡುವ ಸಲುವಾಗಿ ನೆಲಮಂಗಲ ಸಂಚಾರಿ ಪೊಲೀಸರು ಹರಸಾಹಸ ಪಡುವಂತಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More