ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ಪ್ರವಹಿಸಿದ ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ: ಹಾಸನ ಪೊಲೀಸ್ ವರಿಷ್ಠಾಧಿಕಾರಿ

ಘಟನೆಯ ಬಳಿಕ ಎಲ್ಲವೂ ಸಾಮಾನ್ಯ ಸ್ಥಿತಿಗೆ ಬಂದಿದ್ದು ಸಾವಿರಾರು ಭಕ್ತಾದಿಗಳು ಧರ್ಮ ದರ್ಶನಕ್ಕಾಗಿ ಸರತಿ ಸಾಲಲ್ಲಿ ನಿಂತಿದ್ದಾರೆ ಎಂದು ಸುಜೀತಾ ಹೇಳಿದರು. ಹಾಸನದ ವರದಿಗಾರ ಹೇಳುವ ಹಾಗೆ, ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಈ ವರ್ಷ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿರುವ ಮಹಿಳೆಯರ ಸಂಖ್ಯೆ ಅಪರಿಮಿತವಾಗಿದೆ.

ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ಪ್ರವಹಿಸಿದ ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ: ಹಾಸನ ಪೊಲೀಸ್ ವರಿಷ್ಠಾಧಿಕಾರಿ
|

Updated on: Nov 10, 2023 | 5:37 PM

ಹಾಸನ: ಸಾವಿರಾರು ಜನ ಹಾಸನಾಂಬೆಯ (Hasanambe) ಧರ್ಮದರ್ಶನ ಸಾಲಲ್ಲಿ ನಿಂತಾಗ ಬ್ಯಾರಿಕೇಡ್ ನಲ್ಲಿ ವಿದ್ಯುತ್ ಪ್ರವಹಿಸಿದ ಕಾರಣ ಭಕ್ತರು ಹೆದರಿಕೆ ಮತ್ತು ಆತಂಕದಲ್ಲಿ ಪ್ರಾಣವುಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ ಘಟನೆಯನ್ನು ಈಗಾಗಲೇ ವರದಿ ಮಾಡಿದ್ದೇವೆ. ಟಿವಿ9 ಕನ್ನಡ ವಾಹಿನಿಯ ಹಾಸನ ವರದಿಗಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Hassan SP) ಮಹಮ್ಮದ್ ಸುಜೀತಾ ಎಮ್ ಎಸ್ (Mohammad Sujeetha MS) ಅವರೊಂದಿಗೆ ಮಾತಾಡಿದ್ದು ಅವರು ಹೇಳುವ ಪ್ರಕಾರ ಪ್ರಾಣಾಪಾಯದಂಥ ಸಂಗತಿಯೇನೂ ನಡೆದಿಲ್ಲ. ಬ್ಯಾರಿಕೇಡ್ ನಲ್ಲಿ ವಿದ್ಯುತ್ ಪ್ರವಹಿಸಿದಕ್ಕೆ ಕಾರಣವನ್ನು ಜೆಸ್ಕಾಂ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ ಎಂದು ಹೇಳಿದರು. ವಿದ್ಯುತ್ ಶಾಕ್ ಅನುಭವಿಸಿದ ಸುಮಾರು 15 ಜನರನ್ನು ಹಾಸನ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಸ್ ಪಿ ಹೇಳಿದರು. ಘಟನೆಯ ಬಳಿಕ ಎಲ್ಲವೂ ಸಾಮಾನ್ಯ ಸ್ಥಿತಿಗೆ ಬಂದಿದ್ದು ಸಾವಿರಾರು ಭಕ್ತಾದಿಗಳು ಧರ್ಮ ದರ್ಶನಕ್ಕಾಗಿ ಸರತಿ ಸಾಲಲ್ಲಿ ನಿಂತಿದ್ದಾರೆ ಎಂದು ಸುಜೀತಾ ಹೇಳಿದರು. ಹಾಸನದ ವರದಿಗಾರ ಹೇಳುವ ಹಾಗೆ, ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಈ ವರ್ಷ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿರುವ ಮಹಿಳೆಯರ ಸಂಖ್ಯೆ ಅಪರಿಮಿತವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್