ವ್ಯಕ್ತಿ ಅನುಮಾಸ್ಪದ ಸಾವು: ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ
ಹಾಸನ ತಾಲೂಕಿನ ರಾಯಪುರದಲ್ಲಿ ಬಾರ್ ಎದುರು ನಿಲ್ಲಿಸಿದ್ದ ಕಾರಿನಲ್ಲಿ ದೊರೆಸ್ವಾಮಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿ, ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಾಗ ಪೊಲೀಸರು ಲಘು ಲಾಠಿಪ್ರಹಾರ ನಡೆಸಿದರು. ಈ ಘಟನೆಯಲ್ಲಿ ಡಿವೈಎಸ್ಪಿ ಸೇರಿದಂತೆ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ.
ಹಾಸನ, ಮಾರ್ಚ್ 06: ಬಾರ್ ಎದುರು ಕಾರಿನೊಳಗೆ ವ್ಯಕ್ತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಹಾಸನ ತಾಲೂಕಿನ ರಾಯಪುರ ಬಳಿಯ ಲಕ್ಷ್ಮೀ ವೆಂಕಟೇಶ್ವರ ಬಾರ್ ಬಳಿ ನಿನ್ನೆ ನಡೆದಿದೆ. ವೀರಾಪುರದ ದೊರೆಸ್ವಾಮಿ(42) ಶವ ಪತ್ತೆ ಆಗಿತ್ತು. ಬಾರ್ ಎದುರು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಸಂಬಂಧಿಕರು ಘಟನೆ ಖಂಡಿಸಿ ಬಾರ್ ಎದುರು ಶವವಿಟ್ಟು ಪ್ರತಿಭಟಿಸಿದ್ದಾರೆ. ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೆಲವರು ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಲಘು ಲಾಠಿಪ್ರಹಾರ ನಡೆಸಿ ಪೊಲೀಸರು ಗುಂಪು ಚದುರಿಸಿದ್ದಾರೆ. ಈ ವೇಳೆ ಹಾಸನ ಡಿವೈಎಸ್ಪಿ ಗಂಗಾಧರಪ್ಪ, ಗ್ರಾಮಾಂತರ ಠಾಣೆ ಎಸ್ಐ ಕುಮಾರ್, ಕಾನ್ಸ್ಟೇಬಲ್ಗಳಾದ ಜಮಾಲುದ್ದೀನ್, ಕುಮಾರ್ ಎಂಬುವವರಿಗೆ ಗಾಯಗಳಾಗಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್ನ ಯುಎಸ್ ನೆಲೆಗಳ ಮೇಲೆ ಇರಾನ್ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
