AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದರ್ಶನ ವೇಳೆ ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ: ಭಕ್ತಿ ಮೆರೆದ ವ್ಯಕ್ತಿ

ಹಾಸನಾಂಬೆ ದರ್ಶನ ವೇಳೆ ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ: ಭಕ್ತಿ ಮೆರೆದ ವ್ಯಕ್ತಿ

ಅಕ್ಷಯ್​ ಪಲ್ಲಮಜಲು​​
|

Updated on: Oct 21, 2025 | 4:44 PM

Share

ಹಾಸನಾಂಬೆ ದೇವಸ್ಥಾನದ ದರ್ಶನಕ್ಕೆ ಬಂದಿದ್ದ ಮೈಸೂರಿನ ಮಹಿಳೆಯೊಬ್ಬರು ಕಳೆದುಕೊಂಡಿದ್ದ ತಮ್ಮ ಮಾಂಗಲ್ಯ ಸರವನ್ನು ಪ್ರಾಮಾಣಿಕ ಭಕ್ತರೊಬ್ಬರು ಮರಳಿಸಿದ್ದಾರೆ. ದೇವಸ್ಥಾನದ ಆವರಣದಲ್ಲಿ ಚಿನ್ನದ ಸರ ಪತ್ತೆಯಾದ ನಂತರ, ಘೋಷಣೆ ಮೂಲಕ ಮಹಿಳೆಯನ್ನು ಸಂಪರ್ಕಿಸಿ, ಸರಿಯಾದ ಗುರುತು ದೃಢೀಕರಿಸಿ ಮರಳಿಸಲಾಯಿತು. ಈ ಘಟನೆ ಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ.

ಹಾಸನ , ಅ.21: ಜಿಲ್ಲೆಯ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದಲ್ಲಿ ನಡೆದ ಭಕ್ತಿಯ ಮತ್ತು ಪ್ರಾಮಾಣಿಕತೆಯ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ದೇವಸ್ಥಾನದ ದರ್ಶನಕ್ಕೆ ಆಗಮಿಸಿದ್ದ ಮೈಸೂರಿನ ಮಹಿಳೆಯೊಬ್ಬರು ತಮ್ಮ ಮಾಂಗಲ್ಯ ಸರವನ್ನು ಕಳೆದುಕೊಂಡಿದ್ದರು. ದೇವಸ್ಥಾನದ ಆವರಣದಲ್ಲಿ ಚಿನ್ನದ ಸರ ಪತ್ತೆಯಾದ ನಂತರ, ಇದನ್ನು ಸ್ಕೌಟ್ ಅಂಡ್ ಗೈಡ್ ಮಕ್ಕಳು ಮತ್ತು ಪ್ರಾಮಾಣಿಕ ಭಕ್ತರೊಬ್ಬರು ದೇವಸ್ಥಾನದ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಸರ ಪತ್ತೆಯಾದ ನಂತರ, ದೇವಸ್ಥಾನದ ಆಡಳಿತ ಮಂಡಳಿಯು ಈ ಬಗ್ಗೆ ಮೈಕದಲ್ಲಿ ಘೋಷಣೆ ಮಾಡಿದ್ದಾರೆ. ಘೋಷಣೆಯನ್ನು ಕೇಳಿ ಬಂದ ಮಹಿಳೆ, ಕಳೆದುಹೋದ ಸರದ ನಿಖರವಾದ ಗುರುತನ್ನು ವಿವರವಾಗಿ ವಿವರಿಸಿದ್ದಾರೆ. ಅವರ ಹೇಳಿಕೆ ಪ್ರಕಾರ ದೇವಸ್ಥಾನದ ಮುಂಭಾಗದಲ್ಲಿ ಚಿನ್ನದ ಸರವನ್ನು ಮಹಿಳೆಗೆ ಮರಳಿಸಲಾಯಿತು. ಈ ಸಂದರ್ಭದಲ್ಲಿ ಸರವನ್ನು ಪಡೆದ ನಂತರ ಎಚ್ಚರದಿಂದ ಇರುವಂತೆ ಹೇಳಿದ್ದಾರೆ. ಇನ್ನು ಕಳೆದುಹೋದ ಆಭರಣವನ್ನು ಪ್ರಾಮಾಣಿಕವಾಗಿ ಮರಳಿಸಿದ ಭಕ್ತರ ನಡೆಯನ್ನು ಶ್ಲಾಘನೆ ಮಾಡಲಾಗಿತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More