ಬೆಂಗಳೂರು: ಮುಡಾ ಹಗರಣವನ್ನು ಬಯಲಿಗೆಳೆದಿರುವ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇಂದು ಈಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ಕಚೇರಿಯೊಳಗೆ ಹೋಗುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ತನಗೆ ನೋಟೀಸ್ ಬಂದಿದೆ, ನಿರ್ದಿಷ್ಟವಾಗಿ ಯಾವ ಪ್ರಕರಣದ ವಿಚಾರಣೆ ಅಂತ ನೋಟೀಸ್ನಲ್ಲಿ ಉಲ್ಲೇಖವಾಗಿಲ್ಲ; ಹಾಗಾಗಿ, ಮುಡಾ ಸೇರಿದಂತೆ ತಾನು ದಾಖಲಿಸಿರುವ ಎಲ್ಲ ದೂರುಗಳ ಪ್ರಕರಣಗಳಿಗೆ ಸಂಬಂಧಪಟ್ಟ ಕಾಗದಪತ್ರಗಳನ್ನು ತನ್ನೊಂದಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸೈಟುಗಳನ್ನು ಮುಡಾಗೆ ಹಿಂತಿರುಗಿಸುವುದು ಕಳ್ಳನೊಬ್ಬ ಕದ್ದ ಮಾಲನ್ನು ವಾಪಸ್ಸು ಕೊಟ್ಟಂತೆ: ಗಂಗರಾಜು