ನನ್ನ ಭೇಟಿಗೆ ಬರೋದು ಬೇಡ ಅಂತ ವಿಜಯೇಂದ್ರನಿಗೆ ಹೇಳಿದ್ದೇನೆ: ಬಸನಗೌಡ ಪಾಟೀಲ್ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 24, 2023 | 3:06 PM

ಬಿಜೆಪಿ ಕಾರ್ಯಕರ್ತರನ್ನು ಆಧಾರಿತ ಪಕ್ಷ, ಕಾಂಗ್ರೆಸ್ ಪಕ್ಷದ ಹಾಗೆ ಸರ್ವಾಧಿಕಾರದ ಹೈಕಮಾಂಡ್ ಇಲ್ಲಿಲ್ಲ, ಬಿಜೆಪಿ ರಾಜ್ಯಧ್ಯಕ್ಷನನ್ನು ಅಯ್ಕೆ ಮಾಡುವಾಗ ಎಲ್ಲರ ಅಭಿಪ್ರಾಯ ಪಡೆಯಬೇಕಿತ್ತು ಎಂದು ಬಸನಗೌಡ ಯತ್ನಾಳ್ ಹೇಳುತ್ತಾರೆ. ಆದರೆ, ಅವರು ವಿಜಯೇಂದ್ರ ವಿರುದ್ಧ ಮಾಡುತ್ತಿರುವ ಆರೋಪಗಳು ರಾಜ್ಯದಲ್ಲಿ ಪಕ್ಷದ ಇಮೇಜಿಗೆ ಧಕ್ಕೆ ಉಂಟುಮಾಡುವ ಅಪಾಯವಂತೂ ಇದೆ.

ಬೆಂಗಳೂರು: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ತಮ್ಮ ರಾಜಕೀಯ ಬದುಕಿನಲ್ಲಿ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಹಾಗೂ ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅವರ ಮಗ ಬಿವೈ ವಿಜಯೇಂದ್ರರನ್ನು (BY Vijayendra) ಯಾವತ್ತೂ ಮನ್ನಿಸಲಾರೇನೋ? ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಿಜಯೇಂದ್ರರನ್ನು ತನ್ನ ಭೇಟಿಗೆ ಬರೋದು ಬೇಡ ಅಂತ ಸ್ಪಷ್ಟವಾಗಿ ಹೇಳಿದ್ದೇನೆಂದರು. ಅವರು ಹಿಂದೆ ಮಾಡಿದ ಆಟಗಳೆಲ್ಲ ತನಗೆ ಚೆನ್ನಾಗಿ ನೆನಪಿದೆ, ಪಕ್ಷದಿಂದ ತನ್ನ ಉಚ್ಚಾಟನೆಗೆ ಕಾರಣ ಯಾರಾಗಿದ್ದರು ಅನ್ನೋದು ಗೊತ್ತಿದೆ ಅಂತ ಹೇಳಿದ ಯತ್ನಾಳ್ ವಿಜಯಪುರ ನಗರಾಭಿವೃದ್ಧಿಗಾಗಿ ಯಡಿಯೂರಪ್ಪ ರೂ. 175 ಕೋಟಿ ಬಿಡುಗಡೆ ಮಾಡಿದ್ದಾಗ ವಿಜಯೇಂದ್ರ ಅದನ್ನು ತನ್ನ ಬಳಿ ಇಟ್ಟುಕೊಂಡಿದ್ದರು ಎಂಬ ಗಂಭೀರ ಆರೋಪ ಮಾಡಿದರು. ವಿಜಯೇಂದ್ರ ತನ್ನಲ್ಲಿಗೆ ಬಂದ್ರೆ ಏನೂ ಆಗೋದಿಲ್ಲ, ಅಂಥ ನಾಟಕಗಳು ಬೇಕಿಲ್ಲ ಎಂದ ಯತ್ನಾಳ್, ಅವರು ಬಂದರೆ ಮಾಧ್ಯಮ ಒಂದಷ್ಟು ಸರಕು ಸಿಗುತ್ತದೆ ಮತ್ತು ವಿಶ್ಲೇಷಣೆಗಳು ಶುರುವಾಗುತ್ತವೆ, ಅದೆಲ್ಲ ಬೇಡವೇ ಬೇಡ ಎಂದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.