AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮಾಡಿದ ಟೀಕೆಗಳಿಗೆ ಮಹತ್ವ ನೀಡಲ್ಲ: ನಿಖಿಲ್

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮಾಡಿದ ಟೀಕೆಗಳಿಗೆ ಮಹತ್ವ ನೀಡಲ್ಲ: ನಿಖಿಲ್

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 18, 2024 | 2:23 PM

Share

ರಾಮನಗರ ಮತ್ತು ಚನ್ನಪಟ್ಟಣದ ಜನರ ಜೊತೆ ದೇವೇಗೌಡರು ದಶಕಗಳಿಂದ ಅವಿನಾಭಾವ ಸಂಬಂಧ ಹೊಂದಿದ್ದಾರೆ ಅಂತ ಹೇಳುವಾಗ ನಿಖಿಲ್ ಮತ್ತೊಮ್ಮೆ ವರ್ಷವನ್ನು ತಪ್ಪು ಹೇಳಿದರು. ಚುನಾವಣಾ ಪ್ರಚಾರದಲ್ಲಿ ಅವರು 1983 ರಿಂದ ಚನ್ನಪಟ್ಟಣದೊಂದಿಗೆ ಬಾಂಧವ್ಯ ಹೊಂದಿದ್ದಾರೆ ಎಂದಾಗ ವೇದಿಕೆ ಮೇಲಿದ್ದ ದೇವೇಗೌಡರು 83 ಅಲ್ಲ 73 ಅಂತ ತಿದ್ದಿದ್ದರು!

ಹಾಸನ: ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮಾಡಿದ ಟೀಕೆ-ಕಾಮೆಂಟ್​ಗಳನ್ನು ತಾನು ಗಂಭೀರವಾಗಿ ಪರಿಗಣಿಸಿಲ್ಲ ಮತ್ತು ಮಹತ್ವವನ್ನೂ ನೀಡಿಲ್ಲ, ಚುನಾವಣೆ ಮುಗಿದಿದೆ ಎನ್ನುವ ಕಾರಣಕ್ಕೆ ಟೀಕೆ ಮಾಡಿದವರನ್ನು ತರಾಟೆಗೆ ತೆಗೆದುಕೊಳ್ಳುವ ಜಾಯಮಾನ ತನ್ನದಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದೇವೇಗೌಡರ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರಿಗೆ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ ದಂಪತಿ