ಪ್ರಜ್ವಲ್ ನನಗೆ ಹೇಳಿರುವುದನ್ನು ಎಸ್ಐಟಿ ಅಧಿಕಾರಿಗಳಿಗೆ ತಿಳಿಸಿದ್ದೇನೆ: ಜಿ ಅರುಣ್, ಪ್ರಜ್ವಲ್ ವಕೀಲ
ಎಸ್ಐಟಿ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ, ಯಾವುದೇ ಪ್ರತಿಕ್ರಿಯೆ ಇನ್ನೂ ಬಂದಿಲ್ಲ, ಅದರೆ ಕಾನೂನು ವ್ಯಾಪ್ತಿಯಲ್ಲಿ ಸಂತ್ರಸ್ತರಂತೆ ಅರೋಪಿ ಸ್ಥಾನದಲ್ಲಿರುವವರಿಗೂ ಕೆಲ ಅವಕಾಶಗಳು ಇರುತ್ತವೆ ಎಂದು ವಕೀಲ ಹೇಳಿದರು
ಬೆಂಗಳೂರು: ನಗರದ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಪ್ರಜ್ವಲ್ ರೇವಣ್ಣ (Prajwal Revanna) ಪರ ವಕೀಲ ಜಿ ಅರುಣ್ (G Arun) ತನ್ನ ಕಕ್ಷಿದಾರ ನೀಡಿರುವ ಮಾಹಿತಿಯನ್ನು ಎಸ್ಐಟಿ ಅಧಿಕಾರಿಗಳಿಗೆ (SIT sleuths) ರವಾನಿಸಿರುವುದಾಗಿ ಹೇಳಿದರು. ವಿದೇಶವೊಂದರಿಂದ ಪ್ರಜ್ವಲ್ ರೇವಣ್ಣ ತಮ್ಮ ವಕೀಲ ಅರುಣ್ ಅವರಿಗೆ ಮೇಲೊಂದನ್ನ ಮಾಡಿದ್ದು, ಎಸ್ ಐಟಿ ಮುಂದೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೋರಲು ತಿಳಿಸಿದ್ದರಂತೆ, ಅದನ್ನೇ ತಾನು ಸಿಐಡಿ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಅರುಣ್ ಹೇಳಿದರು. ಎಸ್ಐಟಿ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ, ಯಾವುದೇ ಪ್ರತಿಕ್ರಿಯೆ ಇನ್ನೂ ಬಂದಿಲ್ಲ, ಅದರೆ ಕಾನೂನು ವ್ಯಾಪ್ತಿಯಲ್ಲಿ ಸಂತ್ರಸ್ತರಂತೆ ಅರೋಪಿ ಸ್ಥಾನದಲ್ಲಿರುವವರಿಗೂ ಕೆಲ ಅವಕಾಶಗಳು ಇರುತ್ತವೆ ಎಂದು ವಕೀಲ ಹೇಳಿದರು. ಪ್ರಜ್ವಲ್ ಮೇ ರಂದು ಭಾರತಕ್ಕೆ ವಾಪಸ್ಸಾಗುವ ಬಗ್ಗೆ ಹಬ್ಬಿರುವ ವದಂತಿ ಬಗ್ಗೆ ತಾನು ಪ್ರತಿಕ್ರಿಯೆ ನೀಡಲ್ಲ, ತನ್ನ ಮತ್ತು ಕಕ್ಷಿದಾರನ ನಡುವೆ ಮೇಲ್ ಗಳ ಮೂಲಕ ನಡೆದಿರುವ ವಿಚಾರ ವಿನಿಮಯದ ಆಧಾರದಲ್ಲಿ ತಾನು ಮಾತಾಡುತ್ತಿರುವುದಾಗಿ ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್: SIT ತನಿಖೆಗೆ ಸಂತ್ರಸ್ತೆಯರು ಹಿಂದೇಟು!
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

