ಅಧಿಕಾರದ ದುರಾಸೆ ಇಲ್ಲ ಮತ್ತು ಡಬಲ್ ಗೇಮ್ ಅಡೋದು ನಂಗೊತ್ತಿಲ್ಲ: ವಿ ಸೋಮಣ್ಣ

ರಸ್ತೆಗಳ ಮೇಲೆ ನಡೆಯುವ ಚರ್ಚೆಗಳಿಗೆ ಉತ್ತರ ನೀಡಕ್ಕಾಗಲ್ಲ, ಕಳೆದ 45 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿದ್ದು ಅಧಿಕಾರದ ಮಜಲುಗಳನ್ನು ಅನುಭವಿಸಿರುವುದಾಗಿ ಸೋಮಣ್ಣ ಹೇಳಿದರು. ತಾನು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಮಾಧ್ಯಮದವರಿಗೆ ತಿಳಿಸದಿರಲು ಸಾಧ್ಯವಿಲ್ಲ ಎಂದು ಹೇಳಿದ ಅವರು ಸ್ವಲ್ಪ ದಿನಗಳ ನಂತರ ಮುಂದಿನ ರಾಜಕೀಯ ನಡೆ ಬಗ್ಗೆ ತಿಳಿಸುವುದಾಗಿ ಹೇಳಿದರು.

ಅಧಿಕಾರದ ದುರಾಸೆ ಇಲ್ಲ ಮತ್ತು ಡಬಲ್ ಗೇಮ್ ಅಡೋದು ನಂಗೊತ್ತಿಲ್ಲ: ವಿ ಸೋಮಣ್ಣ
|

Updated on: Nov 16, 2023 | 5:06 PM

ಬೆಂಗಳೂರು: ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ವಿ ಸೋಮಣ್ಣ (V Somanna) ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಒಂದು ಹಂತದಲ್ಲಿ ತಾಳ್ಮೆ ಕಳೆದಕೊಂಡರು. ಬಿಜೆಪಿ ರಾಜ್ಯ ಘಟಕಕ್ಕೆ ಬಿವೈ ವಿಜಯೇಂದ್ರರನ್ನು (BY Vijayendra) ಅಧ್ಯಕ್ಷ ಮಾಡಿದ್ದು ಅವರಲ್ಲಿ ನಿರಾಸೆ ಮತ್ತು ಬೇಸರ ಮೂಡಿಸಿದೆ. ಕಾಂಗ್ರೆಸ್ ಪಕ್ಷ ಸೇರುವ ಯೋಚನೆಯೇನಾದರೂ ಇದೆಯಾ ಅಂತ ಮಾಧ್ಯಮದವರು ಕೇಳಿದಾಗ ಸಿಡಿಮಿಡಿಗೊಂಡ ಅವರು, ತನಗೆ ಯಾವುದೇ ಪಕ್ಷದಿಂದ ಲೋಕ ಸಭಾ ಚುನಾವಣೆಯಲ್ಲಿ (Lok Sabha polls) ಸ್ಪರ್ಧಿಸುವ ಆಸೆಯಿಲ್ಲ, ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, ಮತ್ತು ಡಬಲ್ ಗೇಮ್ ಆಡೋದು ತನಗೆ ಒಗ್ಗದ ವಿಚಾರ ಎಂದು ಹೇಳಿದರು. ರಸ್ತೆಗಳ ಮೇಲೆ ನಡೆಯುವ ಚರ್ಚೆಗಳಿಗೆ ಉತ್ತರ ನೀಡಕ್ಕಾಗಲ್ಲ, ಕಳೆದ 45 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿದ್ದು ಅಧಿಕಾರದ ಮಜಲುಗಳನ್ನು ಅನುಭವಿಸಿರುವುದಾಗಿ ಸೋಮಣ್ಣ ಹೇಳಿದರು. ತಾನು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಮಾಧ್ಯಮದವರಿಗೆ ತಿಳಿಸದಿರಲು ಸಾಧ್ಯವಿಲ್ಲ ಎಂದು ಹೇಳಿದ ಅವರು ಸ್ವಲ್ಪ ದಿನಗಳ ನಂತರ ಮುಂದಿನ ರಾಜಕೀಯ ನಡೆ ಬಗ್ಗೆ ತಿಳಿಸುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ