AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಟಿಕೆಟ್ ಸಿಗದಿದ್ದರೆ ಭವಾನಿ ರೇವಣ್ಣ ಪಕ್ಷೇತರರಾಗಿ ಸ್ಪರ್ಧಿಸುವ ವಿಚಾರ ನನಗೆ ಗೊತ್ತಿಲ್ಲ: ಹೆಚ್ ಡಿ ಕುಮಾರಸ್ವಾಮಿ

Karnataka Assembly Polls: ಟಿಕೆಟ್ ಸಿಗದಿದ್ದರೆ ಭವಾನಿ ರೇವಣ್ಣ ಪಕ್ಷೇತರರಾಗಿ ಸ್ಪರ್ಧಿಸುವ ವಿಚಾರ ನನಗೆ ಗೊತ್ತಿಲ್ಲ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 03, 2023 | 2:40 PM

Share

ಹೆಚ್ ಡಿ ದೇವೇಗೌಡ ದೆಹಲಿಗೆ ಹೋಗಿದ್ದು ಇವತ್ತು ವಾಪಸ್ಸಾಗಲಿದ್ದಾರೆ. ಅವರು ಬಂದ ಬಳಿಕ ಟಿಕೆಟ್ ವಿಷಯ ಅಂತಿಮಗೊಳ್ಳುತ್ತದೆ ಎಂದು ಕುಮಾರಸ್ವಾಮಿ ಹೇಳಿದರು

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗೆ ಸಂಬಂಧಿಸಿದಂತೆ ತಮ್ಮ ನಿಲುವಿಗೂ ಈಗಲೂ ಬದ್ಧ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು. ರಾಮನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಹೆಚ್ ಡಿ ದೇವೇಗೌಡ (HD Devegowda) ದೆಹಲಿಗೆ ಹೋಗಿದ್ದು ಇವತ್ತು ವಾಪಸ್ಸಾಗಲಿದ್ದಾರೆ. ಅವರು ಬಂದ ಬಳಿಕ ಟಿಕೆಟ್ ವಿಷಯ ಅಂತಿಮಗೊಳ್ಳುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಭವಾನಿ ರೇವಣ್ಣ (Bhavani Revanna) ಟಿಕೆಟ್ ಸಿಕ್ಕದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸುತ್ತೇನೆಂದು ಹೇಳಿರುವ ಬಗ್ಗೆ ಕುಮಾರಸ್ವಾಮಿಯವರನ್ನು ಕೇಳಿದಾಗ, ತಮಗೇನೂ ಗೊತ್ತಿಲ್ಲ, ಅದು ಕೇವಲ ವದಂತಿಯಾಗಿರಬಹುದು, ಮಾಧ್ಯಮದವರು ಅವರನ್ನೇ ಕೇಳುವುದು ಒಳಿತು ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More