AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಾಮೈದ ನೋಟೀಸ್ ಇಲ್ಲದೆ ಲೋಕಾಯುಕ್ತ ಕಚೇರಿಗೆ ಯಾಕೆ ಹೋಗಿದ್ದರು ಗೊತ್ತಿಲ್ಲ: ಪರಮೇಶ್ವರ್

ಸಿಎಂ ಬಾಮೈದ ನೋಟೀಸ್ ಇಲ್ಲದೆ ಲೋಕಾಯುಕ್ತ ಕಚೇರಿಗೆ ಯಾಕೆ ಹೋಗಿದ್ದರು ಗೊತ್ತಿಲ್ಲ: ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 20, 2024 | 12:33 PM

Share

ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವ ಬಗ್ಗೆ ಮಠಾಧೀಶರು ಹೇರುತ್ತಿರುವ ಒತ್ತಡದ ಬಗ್ಗೆ ಪರಮೇಶ್ವರ್ ಅವರ ಗಮನ ಸೆಳೆದಾಗ, ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ಸಂವಿಧಾನದಲ್ಲಿ ನಂಬಿಕೆಯುಳ್ಳವರು ಅದನ್ನು ಸಾರ್ವಜನಿಕಗೊಳಿಸಬೇಕು ಎನ್ನುತ್ತಿದ್ದಾರೆ, ವರದಿಯ ಸಾಧಕ ಬಾಧಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಯನ ಮಾಡುತ್ತಿದ್ದಾರೆ ಎಂದರು.

ಬೆಂಗಳೂರು: ಎರಡು ದಿನಗಳ ಹಿಂದೆ ನಗರದ ಈಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ನಿನ್ನೆ ರಾತ್ರಿ ಏಕಾಏಕಿ ಯಾವುದೇ ನೋಟೀಸ್ ಇಲ್ಲದಿದ್ದರೂ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದಾರೆ. ಯಾಕೆ ಅಂಥ ಅವಸರವೇನಿತ್ತು ಅಂತ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಕೇಳಿದರೆ ತನಗೆ ಮಾಹಿತಿ ಇಲ್ಲ ಅಂತ ಹೇಳಿ ಲೋಕಾಯುಕ್ತ ಕಚೇರಿ ಬೀಗ ಹಾಕಿದ್ದಾರೋ ಇಲ್ವೋ ಅಂತ ನೋಡೋಕೆ ಹೋಗಿರಬೇಕು ಎಂದು ನಗಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಧಿವೇಶನದಲ್ಲಿ ಪ್ರತಿಪಕ್ಷಗಳು ನಡೆಸುವ ದಾಳಿಗೆ ಸನ್ನದ್ಧರಾಗಿರುವಂತೆ ತಿಳಿಸಲು ಸಿಎಂ ಸಭೆ ಕರೆದಿದ್ದರು: ಪರಮೇಶ್ವರ್