ಮುಡಾ ಕಚೇರಿ ಮೇಲೆ ಈಡಿ ದಾಳಿ ನಡೆಸಿದ್ದು ನನಗೆ ಸಂಬಂಧಿಸದ ವಿಷಯ: ಭೈರತಿ ಸುರೇಶ್

Updated on: Oct 18, 2024 | 4:23 PM

ಈಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು ತನಗೆ ಸಂಬಂಧಿಸದ ವಿಷಯ, ಅವರು ಕೇಳುವ ದಾಖಲೆಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ ಎಂದು ಸಚಿವ ಬೈರತಿ ಸುರೇಶ್ ಹೇಳಿದರು. ಮುಡಾ ಕಚೇರಿ ಮೇಲೆ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದು ವಿಷಯವೇ ಅಲ್ಲ ಎನ್ನುವಂತೆ ಅವರು ಮಾತಾಡಿದರು.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದನ್ನು ರೇಡ್ ಎಂದು ಒಪ್ಪಿಕೊಳ್ಳಲು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಯಾರಿಲ್ಲ. ಸರ್ಕಾರಿ ಕಚೇರಿ ಮತ್ತು ಅಧಿಕಾರಿಗಳನ್ನು ತಪಾಸಣೆ ಮಾಡುವ ಅಧಿಕಾರ ಈಡಿ, ಸಿಬಿಐ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಗಿರುತ್ತದೆ, ಈಡಿ ನಡೆಸಿರೋದು ದಾಳಿಯಲ್ಲ, ಅವರಿಗೆ ಕೆಲವು ದಾಖಲೆ ಪತ್ರಗಳು ಬೇಕಿದ್ದವು ಅವುಗಳನ್ನು ಪಡೆಯಲು ಹೋಗಿದ್ದಾರೆ ಎಂದು ಸುರೇಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಹೆಲಿಕಾಪ್ಟರ್​ನಲ್ಲಿ ಅವಸರದಿಂದ ಬಂದ ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಹೊತ್ತೊಯ್ದರು? ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More