ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದೇನೆ, ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಸಿಗುವ ಭರವಸೆ ಇದೆ: ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಅರುಣ್​ ಕುಮಾರ್​ ಬೆಳ್ಳಿ

Updated on: Mar 08, 2024 | 5:53 PM

ದೆಹಲಿಯಲ್ಲಿ ಇಂದು ನಡೆದ ಸಭೆಯಲ್ಲಿ 8-9 ಸೀಟುಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿರುತ್ತದೆ ಮತ್ತು ಇವತ್ತೇ ಆ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ, ಉಳಿದ ಕ್ಷೇತ್ರಗಳಿಗೆ 15 ನೇ ತಾರೀಖಿನೊಳಗೆ ಹೆಸರುಗಳು ಅಂತಿಮಗೊಳ್ಳಲಿವೆ ಎಂದು ಎಂದು ಲಕ್ಷ್ಮಣ್ ಹೇಳಿದರು.

ಮಡಿಕೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರ ಎಂ ಲಕ್ಷ್ಮಣ್ (M Laxman) ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ (Mysuru-Kodagu Constituency) ಟಿಕೆಟ್ ತಮಗೆ ಸಿಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕಳೆದೆರಡು ವರ್ಷಗಳಿಂದ ಕೊಡುಗು ಜಿಲ್ಲೆಯ ಉಸ್ತುವಾರಿಯಾಗಿ (Kodagu district in charge) ನಿಷ್ಠೆಯಿಂದ ದುಡಿದಿರುವುದಾಗಿ ಹೇಳಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವಲ್ಲಿ ತನ್ನ ಅಳಿಲು ಸೇವೆ ಇದೆ ಎಂದರು. ಟಿಕೆಟ್ ಸಿಕ್ಕಿದ್ದೇಯಾದರೆ ತಾನು ಇಟ್ಟುಕೊಂಡಿರುವ ವಿಶನ್ ಮತ್ತು ರಾಜ್ಯ ಸರ್ಕಾರ ನೀಡಿರುವ ಕಾರ್ಯಕ್ರಮಗಳ ಆಧಾರದಲ್ಲಿ ವೋಟು ಕೇಳುವುದಾಗಿ ಲಕ್ಷ್ಮಣ್ ಹೇಳಿದರು. ದೆಹಲಿಯಲ್ಲಿ ಇಂದು ನಡೆದ ಸಭೆಯಲ್ಲಿ 8-9 ಸೀಟುಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿರುತ್ತದೆ ಮತ್ತು ಇವತ್ತೇ ಆ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ, ಉಳಿದ ಕ್ಷೇತ್ರಗಳಿಗೆ 15 ನೇ ತಾರೀಖಿನೊಳಗೆ ಹೆಸರುಗಳು ಅಂತಿಮಗೊಳ್ಳಲಿವೆ ಎಂದು ಎಂದು ಲಕ್ಷ್ಮಣ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೆಚ್​ಸಿ ಮಹದೇವಪ್ಪರನ್ನ ಕರೆದುಕೊಂಡು ಬರ್ತಿನಿ ನೀವೂ ಚರ್ಚೆಗೆ ಬನ್ನಿ: ಪ್ರತಾಪ್​ ಸಿಂಹಗೆ ಎಂ ಲಕ್ಷ್ಮಣ್ ಸವಾಲ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.