AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ; 23 ಲೋಕಸಭಾ ಕ್ಷೇತ್ರ ಸುತ್ತಿರುವೆ, ಹೋದೆಡೆಯೆಲ್ಲ ಜನರ ಬಾಯಲ್ಲಿ ಮೋದಿ ಜಪ!: ಬಿಎಸ್ ಯಡಿಯೂರಪ್ಪ

ಜನರ ಧೋರಣೆ ನೋಡುತ್ತಿದ್ದರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ರಾಜ್ಯದ ಎಲ್ಲ 28 ಸ್ಥಾನಗಳು ಸಿಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ತಮ್ಮ ಹಳೆಯ ಶಿಷ್ಯ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಉಲ್ಲೇಖಿಸಿದ ಯಡಿಯೂರಪ್ಪ, ಅವರು ಬಿಜೆಪಿಗೆ ವಾಪಸ್ಸು ಬಂದಿರೋದು ಈ ಭಾಗದಲ್ಲಿ ಪಕ್ಷಕ್ಕೆ ಆನೆಬಲ ತಂದಿದೆ ಎಂದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 16, 2024 | 7:44 PM

Share

ಬಳ್ಳಾರಿ: ಈಗಾಗಲೇ ಚರ್ಚಿಸಿದ ಹಾಗೆ 82-ವರ್ಷ-ವಯಸ್ಸಿನ ಬಿಎಸ್ ಯಡಿಯೂರಪ್ಪ (BS Yediyurappa) ಯುವಕರು ನಾಚುವ ಹಾಗೆ ಲೋಕಸಭಾ ಚುನಾವಣೆಯಲ್ಲಿ ಓಡಾಡುತ್ತಿದ್ದಾರೆ. ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ (Govind Karjol) ಪರ ಪ್ರಚಾರ ನಡೆಸಿದ ಬಳಿಕ ಅವರು ಮತ್ತೊಂದು ಬಿಸಿಲು ನಾಡು ಬಳ್ಳಾರಿಗೆ ಹೋಗಿ ಅಲ್ಲಿನ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು (B Sriramulu) ಪರ ಪ್ರಚಾರ ಮಾಡಿದರು. ಬಳ್ಳಾರಿಗೆ ಆಗಮಿಸುವ ಮೊದಲು 23 ಲೋಕಸಭಾ ಕ್ಷೇತ್ರಗಳಲ್ಲಿ ಸುತ್ತಾಡಿರುವುದಾಗಿ ಹೇಳಿದ ಯಡಿಯೂರಪ್ಪ, ಎಲ್ಲಾ ಕಡೆ ಜನರ ಬಾಯಿಂದ ಮೋದಿ ಮೋದಿ ಉದ್ಗಾರ ಹೊರಬೀಳುತ್ತಿದೆ ಎಂದರು. ಬಳ್ಳಾರಿಯಲ್ಲೂ ಅದೇ ಅಲೆ ಇದೆ ಮತ್ತು ತಮ್ಮ ಅಭ್ಯರ್ಥಿ ಶ್ರೀರಾಮುಲು ಭಾರೀ ಬಹುಮತದೊಂದಿಗೆ ಜಯಭೇರಿ ಬಾರಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಯಡಿಯೂರಪ್ಪ ಹೇಳಿದರು. ಜನರ ಧೋರಣೆ ನೋಡುತ್ತಿದ್ದರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ರಾಜ್ಯದ ಎಲ್ಲ 28 ಸ್ಥಾನಗಳು ಸಿಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ತಮ್ಮ ಹಳೆಯ ಶಿಷ್ಯ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಉಲ್ಲೇಖಿಸಿದ ಯಡಿಯೂರಪ್ಪ, ಅವರು ಬಿಜೆಪಿಗೆ ವಾಪಸ್ಸು ಬಂದಿರೋದು ಈ ಭಾಗದಲ್ಲಿ ಪಕ್ಷಕ್ಕೆ ಆನೆಬಲ ತಂದಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಚುನಾವಣೆ ಫಲಿತಾಂಶ ಬಂದಾಗ ಸಿದ್ದರಾಮಯ್ಯಗೆ ಯಾರು ಗೋ ಬ್ಯಾಕ್ ಯಾರು ಕಂ ಬ್ಯಾಕ್ ಅನ್ನೋದು ಗೊತ್ತಾಗಲಿದೆ: ಬಿಎಸ್ ಯಡಿಯೂರಪ್ಪ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?