AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ; 23 ಲೋಕಸಭಾ ಕ್ಷೇತ್ರ ಸುತ್ತಿರುವೆ, ಹೋದೆಡೆಯೆಲ್ಲ ಜನರ ಬಾಯಲ್ಲಿ ಮೋದಿ ಜಪ!: ಬಿಎಸ್ ಯಡಿಯೂರಪ್ಪ

ಜನರ ಧೋರಣೆ ನೋಡುತ್ತಿದ್ದರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ರಾಜ್ಯದ ಎಲ್ಲ 28 ಸ್ಥಾನಗಳು ಸಿಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ತಮ್ಮ ಹಳೆಯ ಶಿಷ್ಯ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಉಲ್ಲೇಖಿಸಿದ ಯಡಿಯೂರಪ್ಪ, ಅವರು ಬಿಜೆಪಿಗೆ ವಾಪಸ್ಸು ಬಂದಿರೋದು ಈ ಭಾಗದಲ್ಲಿ ಪಕ್ಷಕ್ಕೆ ಆನೆಬಲ ತಂದಿದೆ ಎಂದರು.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Apr 16, 2024 | 7:44 PM

ಬಳ್ಳಾರಿ: ಈಗಾಗಲೇ ಚರ್ಚಿಸಿದ ಹಾಗೆ 82-ವರ್ಷ-ವಯಸ್ಸಿನ ಬಿಎಸ್ ಯಡಿಯೂರಪ್ಪ (BS Yediyurappa) ಯುವಕರು ನಾಚುವ ಹಾಗೆ ಲೋಕಸಭಾ ಚುನಾವಣೆಯಲ್ಲಿ ಓಡಾಡುತ್ತಿದ್ದಾರೆ. ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ (Govind Karjol) ಪರ ಪ್ರಚಾರ ನಡೆಸಿದ ಬಳಿಕ ಅವರು ಮತ್ತೊಂದು ಬಿಸಿಲು ನಾಡು ಬಳ್ಳಾರಿಗೆ ಹೋಗಿ ಅಲ್ಲಿನ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು (B Sriramulu) ಪರ ಪ್ರಚಾರ ಮಾಡಿದರು. ಬಳ್ಳಾರಿಗೆ ಆಗಮಿಸುವ ಮೊದಲು 23 ಲೋಕಸಭಾ ಕ್ಷೇತ್ರಗಳಲ್ಲಿ ಸುತ್ತಾಡಿರುವುದಾಗಿ ಹೇಳಿದ ಯಡಿಯೂರಪ್ಪ, ಎಲ್ಲಾ ಕಡೆ ಜನರ ಬಾಯಿಂದ ಮೋದಿ ಮೋದಿ ಉದ್ಗಾರ ಹೊರಬೀಳುತ್ತಿದೆ ಎಂದರು. ಬಳ್ಳಾರಿಯಲ್ಲೂ ಅದೇ ಅಲೆ ಇದೆ ಮತ್ತು ತಮ್ಮ ಅಭ್ಯರ್ಥಿ ಶ್ರೀರಾಮುಲು ಭಾರೀ ಬಹುಮತದೊಂದಿಗೆ ಜಯಭೇರಿ ಬಾರಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಯಡಿಯೂರಪ್ಪ ಹೇಳಿದರು. ಜನರ ಧೋರಣೆ ನೋಡುತ್ತಿದ್ದರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ರಾಜ್ಯದ ಎಲ್ಲ 28 ಸ್ಥಾನಗಳು ಸಿಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ತಮ್ಮ ಹಳೆಯ ಶಿಷ್ಯ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಉಲ್ಲೇಖಿಸಿದ ಯಡಿಯೂರಪ್ಪ, ಅವರು ಬಿಜೆಪಿಗೆ ವಾಪಸ್ಸು ಬಂದಿರೋದು ಈ ಭಾಗದಲ್ಲಿ ಪಕ್ಷಕ್ಕೆ ಆನೆಬಲ ತಂದಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಚುನಾವಣೆ ಫಲಿತಾಂಶ ಬಂದಾಗ ಸಿದ್ದರಾಮಯ್ಯಗೆ ಯಾರು ಗೋ ಬ್ಯಾಕ್ ಯಾರು ಕಂ ಬ್ಯಾಕ್ ಅನ್ನೋದು ಗೊತ್ತಾಗಲಿದೆ: ಬಿಎಸ್ ಯಡಿಯೂರಪ್ಪ

ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ