ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಲಗೈ ಮೇಲೆ ಗೂಳಿಯ ಹಚ್ಚೆಯಿರೋದು ನಿಮಗೆ ಗೊತ್ತಾ?

ಅರುಣ್​ ಕುಮಾರ್​ ಬೆಳ್ಳಿ

Updated on: Sep 02, 2024 | 12:16 PM

ಗೂಳಿ ಶಕ್ತಿಯನ್ನು ಬಿಂಬಿಸುತ್ತದೆ. ಶಿವಕುಮಾರ್ ಅದರ ಹಚ್ಚೆ ಹಾಕಿಸಿಕೊಂಡಿದ್ದು ಯಾವಾಗ ಅಂತ ಅವರೇ ಯಾವತ್ತಾದರೂ ಹೇಳಬೇಕು. ಹಚ್ಚೆ ಹಾಕಿಸಿಕೊಳ್ಳುವ ಹಿಂದೆ ಒಂದು ಉದ್ದೇಶ ಅಡಗಿರುತ್ತದೆ ಅಂತ ಹಿರಿಯರು ಹೇಳುತ್ತಿರುತ್ತಾರೆ. ಶಿವಕುಮಾರ್ ಯಾವ ಕಾರಣಕ್ಕೆ ಹಾಕಿಸಿಕೊಂಡಿದ್ದಾರೋ?

ರಾಮನಗರ: ನಮ್ಮ ದೇಶದಲ್ಲಿ ರಾಜ್ಯದಲ್ಲಿ ಹಚ್ಚೆ ಹಾಕಿಸಿಕೊಳ್ಳುವುದು ಶತಮಾನಗಳಿಂದ ನಡೆದುಕೊಂಡು ಬಂದಿರುವ ಪದ್ಧತಿ. ಗ್ರಾಮೀಣ ಭಾಗದಲ್ಲಿ ಅದು ಹೆಚ್ಚು ಪ್ರಚಲಿತ. ಹೊಸಪೀಳಿಗೆ ನಗರವಾಸಿಗಳು ಅದನ್ನು ಟ್ಯಾಟೂ ಎಂಬ ಆಧುನಿಕ ಹೆಸರಿನಿಂದ ಹಾಕಿಸಿಕೊಳ್ಳುತ್ತಾರೆ. ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಬಲಗೈ ಮೇಲೆ ಗೂಳಿಯ ಹಚ್ಚೆ ಹಾಕಿಸಿಕೊಂಡಿದ್ದಾರೆ. ಮಾಧ್ಯಮದ ಕೆಮೆರಾ ಕಣ್ಣುಗಳಿಗೆ ಅದು ಇದುವರೆಗೆ ಬಿದ್ದಿರಲಿಲ್ಲ, ಇವತ್ತು ಅವರು ರಾಮನಗರದಲ್ಲಿ ಅರ್ಜಿಗಳ ಮೇಲೆ ಸಹಿ ಮಾಡುತ್ತಿದ್ದಾಗ ಕಂಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಡಿಕೆ ಶಿವಕುಮಾರ್ ​ಲಕ್ಕಿ ಬೈಕ್‌ಗೆ ಹೊಸ ರೂಪ, ಆ ದಿನಗಳನ್ನು ಮೆಲುಕು ಹಾಕಿದ ಡಿಸಿಎಂ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.