ಯಾರ ಮೇಲೂ ದೌರ್ಜನ್ಯ ನಡೆಸಿಲ್ಲ, ಎಫ್ ಐ ಆರ್ ಯಾಕೆ ದಾಖಲಾಗಿದೆ ಗೊತ್ತಿಲ್ಲ: ಡಿ ಸುಧಾಕರ್, ಸಚಿವ

ಯಾರ ಮೇಲೂ ದೌರ್ಜನ್ಯ ನಡೆಸಿಲ್ಲ, ಎಫ್ ಐ ಆರ್ ಯಾಕೆ ದಾಖಲಾಗಿದೆ ಗೊತ್ತಿಲ್ಲ: ಡಿ ಸುಧಾಕರ್, ಸಚಿವ
|

Updated on: Sep 12, 2023 | 4:29 PM

ತಾನು ಜಮೀನು ಕಡೆ ಹೋಗಿ ತಿಂಗಳುಗಳು ಕಳೆದಿವೆ ಹಾಗೂ ದೂರು ಸಲ್ಲಿಸಿದ ಕುಟುಂಬವನ್ನು ಸಮಾರು 15 ವರ್ಷಗಳಿಂದ ಭೇಟಿಯಾಗಿಲ್ಲ ಎಂದು ಸುಧಾಕರ್ ಹೇಳಿದರು. ಯಾವ ಕಾರಣಕ್ಕೆ ಎಫ್ ಐ ಆರ್ ದಾಖಲಾಗಿದೆಯೋ ಗೊತ್ತಿಲ್ಲ, ಅದರೆ ನಾಡಿನ ಕಾನೂನು ವ್ಯವಸ್ಥೆ ಮೇಲೆ ತನಗೆ ಗೌರವವಿದೆ, ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಅವರು ಹೇಳಿದರು.

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರಕ್ಕೆ (Siddaramaiah government) ಸಂಕಷ್ಟವೊಂದು ಎದುರಾಗಿದೆ. ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ ಸುಧಾಕರ್ (D Sudhakar) ವಿರುದ್ಧ ಜಾತಿ ನಿಂದನೆ, ಭೂ ಕಬಳಿಕೆ ಹಾಗೂ ಕುಟುಂಬವೊಂದರ ಮೇಲೆ ದೌರ್ಜನ್ಯ ನಡೆಸಿರುವ ಪ್ರಕರಣ ದಾಖಲಾಗಿದೆ. ವಿಷಯಕ್ಕೆ ಸಂಬಂಧಿಸಿದಂತೆ ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ ಸಚಿವರನ್ನು ನಗರದಲ್ಲಿ ಮಾತಾಡಿಸಿದಾಗ ಅವರು ಎಲ್ಲ ಆರೋಪಗಳನ್ನು ಅಲ್ಲಗಳೆದರು. ತಾನು ಯಾರ ಮೇಲೂ ದೌರ್ಜನ್ಯ ನಡೆಸಿಲ್ಲ, ಜಾತಿ ನಿಂದನೆ ಮಾಡಿಲ್ಲ ಎಂದು ಹೇಳಿದ ಅವರು, ಈಗ ಪ್ರಶ್ನೆಯಲ್ಲಿರುವ ಜಮೀನು (land in question) ಒಂದು ಕಂಪನಿಗೆ ಸೇರಿದ್ದು ಮತ್ತು ತಾನು ಅದರ ನಿರ್ದೇಶಕರಲ್ಲಿ ಒಬ್ಬ ಎಂದು ಹೇಳಿದರು. ತಾನು ಜಮೀನು ಕಡೆ ಹೋಗಿ ತಿಂಗಳುಗಳು ಕಳೆದಿವೆ ಹಾಗೂ ದೂರು ಸಲ್ಲಿಸಿದ ಕುಟುಂಬವನ್ನು ಸಮಾರು 15 ವರ್ಷಗಳಿಂದ ಭೇಟಿಯಾಗಿಲ್ಲ ಎಂದು ಸುಧಾಕರ್ ಹೇಳಿದರು. ಯಾವ ಕಾರಣಕ್ಕೆ ಎಫ್ ಐ ಆರ್ ದಾಖಲಾಗಿದೆಯೋ ಗೊತ್ತಿಲ್ಲ, ಅದರೆ ನಾಡಿನ ಕಾನೂನು ವ್ಯವಸ್ಥೆ ಮೇಲೆ ತನಗೆ ಗೌರವವಿದೆ, ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ