ಯಾರ ಮೇಲೂ ದೌರ್ಜನ್ಯ ನಡೆಸಿಲ್ಲ, ಎಫ್ ಐ ಆರ್ ಯಾಕೆ ದಾಖಲಾಗಿದೆ ಗೊತ್ತಿಲ್ಲ: ಡಿ ಸುಧಾಕರ್, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Sep 12, 2023 | 4:29 PM

ತಾನು ಜಮೀನು ಕಡೆ ಹೋಗಿ ತಿಂಗಳುಗಳು ಕಳೆದಿವೆ ಹಾಗೂ ದೂರು ಸಲ್ಲಿಸಿದ ಕುಟುಂಬವನ್ನು ಸಮಾರು 15 ವರ್ಷಗಳಿಂದ ಭೇಟಿಯಾಗಿಲ್ಲ ಎಂದು ಸುಧಾಕರ್ ಹೇಳಿದರು. ಯಾವ ಕಾರಣಕ್ಕೆ ಎಫ್ ಐ ಆರ್ ದಾಖಲಾಗಿದೆಯೋ ಗೊತ್ತಿಲ್ಲ, ಅದರೆ ನಾಡಿನ ಕಾನೂನು ವ್ಯವಸ್ಥೆ ಮೇಲೆ ತನಗೆ ಗೌರವವಿದೆ, ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಅವರು ಹೇಳಿದರು.

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರಕ್ಕೆ (Siddaramaiah government) ಸಂಕಷ್ಟವೊಂದು ಎದುರಾಗಿದೆ. ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ ಸುಧಾಕರ್ (D Sudhakar) ವಿರುದ್ಧ ಜಾತಿ ನಿಂದನೆ, ಭೂ ಕಬಳಿಕೆ ಹಾಗೂ ಕುಟುಂಬವೊಂದರ ಮೇಲೆ ದೌರ್ಜನ್ಯ ನಡೆಸಿರುವ ಪ್ರಕರಣ ದಾಖಲಾಗಿದೆ. ವಿಷಯಕ್ಕೆ ಸಂಬಂಧಿಸಿದಂತೆ ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ ಸಚಿವರನ್ನು ನಗರದಲ್ಲಿ ಮಾತಾಡಿಸಿದಾಗ ಅವರು ಎಲ್ಲ ಆರೋಪಗಳನ್ನು ಅಲ್ಲಗಳೆದರು. ತಾನು ಯಾರ ಮೇಲೂ ದೌರ್ಜನ್ಯ ನಡೆಸಿಲ್ಲ, ಜಾತಿ ನಿಂದನೆ ಮಾಡಿಲ್ಲ ಎಂದು ಹೇಳಿದ ಅವರು, ಈಗ ಪ್ರಶ್ನೆಯಲ್ಲಿರುವ ಜಮೀನು (land in question) ಒಂದು ಕಂಪನಿಗೆ ಸೇರಿದ್ದು ಮತ್ತು ತಾನು ಅದರ ನಿರ್ದೇಶಕರಲ್ಲಿ ಒಬ್ಬ ಎಂದು ಹೇಳಿದರು. ತಾನು ಜಮೀನು ಕಡೆ ಹೋಗಿ ತಿಂಗಳುಗಳು ಕಳೆದಿವೆ ಹಾಗೂ ದೂರು ಸಲ್ಲಿಸಿದ ಕುಟುಂಬವನ್ನು ಸಮಾರು 15 ವರ್ಷಗಳಿಂದ ಭೇಟಿಯಾಗಿಲ್ಲ ಎಂದು ಸುಧಾಕರ್ ಹೇಳಿದರು. ಯಾವ ಕಾರಣಕ್ಕೆ ಎಫ್ ಐ ಆರ್ ದಾಖಲಾಗಿದೆಯೋ ಗೊತ್ತಿಲ್ಲ, ಅದರೆ ನಾಡಿನ ಕಾನೂನು ವ್ಯವಸ್ಥೆ ಮೇಲೆ ತನಗೆ ಗೌರವವಿದೆ, ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.