ಹಾವೇರಿಯಲ್ಲಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು: ನಿಟ್ಟುಸಿರು ಬಿಟ್ಟ ಕಡೂರು ರೈತರು

Updated on: Dec 04, 2025 | 11:37 AM

ಹಾವೇರಿ ಜಿಲ್ಲೆಯ ಕಡೂರು ಗ್ರಾಮದಲ್ಲಿ ರೈತರಿಗೆ ಕೊನೆಗೂ ಚಿರತೆ ಕಾಟದಿಂದ ಮುಕ್ತಿ ಸಿಕ್ಕಿದೆ. ಕೃಷಿ ಕೆಲಸಕ್ಕೆ ಹೋಗಲು ಭಯಭೀತರಾಗಿದ್ದ ರೈತರನ್ನು ಅರಣ್ಯ ಇಲಾಖೆ ಇದೀಗ ಚಿರತೆ ಸೆರೆ ಹಿಡಿಯುವ ಮೂಲಕ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ಸಿಸಿಟಿವಿಯಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯ ಸೆರೆಯಾದ ನಂತರ, ಬೋನು ಇಟ್ಟು ಚಿರತೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

ಹಾವೇರಿ, ಡಿ.4: ರಾಜ್ಯದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಹಲವು ಕಡೆ ಚಿರತೆ ದಾಳಿಗಳಿಂದ ರೈತರು ಸಂಕಷ್ಟ ಅನುಭವಿಸಿದ್ದಾರೆ. ಇದೀಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದ ರೈತರನ್ನ ನಿದ್ರೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದ್ದಿದ್ದಾರೆ. ಕಡೂರು ಗ್ರಾಮದ ಗುಡ್ಡದ ಸಮೀಪದ‌ ರೈತರ ಜಮೀನಿನಲ್ಲಿ ಈ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಕಳೆದ‌ ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ನಿರಂತರವಾಗು ಅಡ್ಡಾಡುತ್ತಿದ್ದ ಚಿರತೆ ಕಾರಣ ರೈತರು ಚಿರತೆ ಭಯದಿಂದ ಕೃಷಿ ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದರು.ಕಳೆದ ವಾರದ ತೋಟದ ಮನೆಯೊಂದರ ಸಿಸಿಟಿವಿಯಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದೀಗ ಚಿರತೆಯನ್ನು ಪತ್ತೆ ಮಾಡಿ, ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More