ಹಾವೇರಿ: ಎಲ್​ಪಿಜಿ ಸಿಗದೆ ಆಟೋಗೆ ಹಗ್ಗ ಕಟ್ಟಿ 10 ಕಿ.ಮೀ ಕಾರು ಎಳೆತಂದ ಮಾಲೀಕ

Updated on: Apr 18, 2026 | 3:29 PM

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾವೇರಿಯಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆ ಸೃಷ್ಟಿಸಿದೆ. ಗೋ ಗ್ಯಾಸ್ ಬಂಕ್ ಮುಚ್ಚಿರುವುದರಿಂದ, ರೊಟ್ಟಿ ವ್ಯಾಪಾರಿಯೊಬ್ಬರು 10 ಕಿ.ಮೀ. ದೂರದಿಂದ ಆಟೋಗೆ ಹಗ್ಗ ಕಟ್ಟಿ ಸಿಲಿಂಡರ್ ತರಲು ಪರದಾಡಿದ್ದಾರೆ. ಪ್ರತಿ ಕೆ.ಜಿ.ಗೆ 120 ರೂ. ಇದ್ದರೂ ಸಿಲಿಂಡರ್ ಸಿಗುತ್ತಿಲ್ಲ. ಆಟೋ ಚಾಲಕರು ಮತ್ತು ಜನಸಾಮಾನ್ಯರು ಯುದ್ಧ ನಿಲ್ಲಿಸಿ, ಸುಗಮ ಎಲ್‌ಪಿಜಿ ಪೂರೈಕೆಗೆ ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿ, ಏಪ್ರಿಲ್​ 18: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾವೇರಿಯ ಜನಸಾಮಾನ್ಯರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಎಲ್‌ಪಿಜಿ ಸಿಲಿಂಡರ್ ಸಿಗದೆ ಹೈರಾಣಾದ ವ್ಯಾಪಾರಿಯೊಬ್ಬರು ಅನಿಲ ತುಂಬಿಸಲು ಸುಮಾರು 10 ಕಿಲೋ ಮೀಟರ್ ದೂರದವರೆಗೆ ಆಟೋಗೆ ಹಗ್ಗ ಕಟ್ಟಿ ಓಮಿನಿ ಕಾರನ್ನು ಎಳೆದುಕೊಂಡು ಬಂದ ಘಟನೆ ಹಾವೇರಿ-ಹಾನಗಲ್ ರಸ್ತೆಯಲ್ಲಿ ಕಂಡುಬಂದಿದೆ. ಗುಡಿ ಕೈಗಾರಿಕೆಯಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ರೊಟ್ಟಿ ಪೂರೈಕೆ ಮಾಡುವ ವ್ಯಾಪಾರಿಯೊಬ್ಬರು ತಮ್ಮ ಜೀವನೋಪಾಯಕ್ಕಾಗಿ ಎಲ್‌ಪಿಜಿ ಅವಲಂಬಿಸಿದ್ದಾರೆ. ಆದರೆ, ಕಳೆದ ಕೆಲವು ದಿನಗಳಿಂದ ಗ್ಯಾಸ್ ಕೊರತೆ ಎದುರಾಗಿದ್ದು, ಬಂಕ್‌ಗಳು ಬಂದ್ ಆಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More