AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಿಂದಲೇ ಸ್ಪರ್ಧಿಸುವ ಹಟಹಿಡಿದಿರುವ ಸುಮಲತಾ ಅಂಬರೀಶ್ ಆಪ್ತರನ್ನು ತಮ್ಮತ್ತ ಸೆಳೆಯುವ ಕೆಲಸ ಶುರುಮಾಡಿದ ದೇವೇಗೌಡ!

2023 ರ ವಿಧಾನಸಭಾ ಚುನಾವಣೆಯ ಬಳಿಕ 2024ರ ಲೋಕಸಭಾ ಚುನಾವಣೆಗಾಗಿ ಮಾಡಿಕೊಂಡಿರುವ ತಯಾರಿ ನೋಡಿ. ಮಗ ಹೆಚ್ ಡಿ ಕುಮಾರಸ್ವಾಮಿಯನ್ನು ಮುಂದೆ ಮಾಡಿ ತಾವು ಹಿಂದೆ ನಖಶಿಖಾಂತ ದ್ವೇಷಿಸುತ್ತಿದ್ದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಸಲು ವೇದಿಕೆ ಸಜ್ಜು ಮಾಡುತ್ತಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 03, 2024 | 11:19 AM

Share

ಮಂಡ್ಯ: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡ (HD Devegowda) ಚಾಣಾಕ್ಷ ರಾಜಕಾರಣಿ ಅನ್ನೋದರಲ್ಲಿ ಎರಡು ಮಾತಿಲ್ಲ. ರಾಜಕೀಯ ಚದುರಂಗದಾಟದ ಎಲ್ಲ ನಡೆಗಳು ಅವರಿಗೆ ಚೆನ್ನಾಗಿ ಗೊತ್ತು. ಯಾವ ನಡೆ ಯಾವ ಸಂದರ್ಭದಲ್ಲಿ ಆಡಬೇಕು ಅಂತ ಬೇರೆ ರಾಜಕಾರಣಿಗಳು ಅವರಿಂದ ಕಲಿಯಬೇಕು. ಮೊಮ್ಮಗನನ್ನು ಸಂಸದ ಮಾಡುವುದಕ್ಕಾಗಿ ಅವರು 2019ರ ಸಾರ್ವತ್ರಿಕ ಚುನಾವಣೆಯಲ್ಲಿ (2019 Lok Sabha polls) ಹಾಸನ ಬಿಟ್ಟುಕೊಟ್ಟು ತುಮಕೂರು ಕ್ಷೇತ್ರದಿಂದ (Tumakuru constituency) ಸ್ಪರ್ಧಿಸಿ ಸೋತಿದ್ದು ಬೇರೆ ವಿಚಾರ. 2023 ರ ವಿಧಾನಸಭಾ ಚುನಾವಣೆಯ ಬಳಿಕ 2024ರ ಲೋಕಸಭಾ ಚುನಾವಣೆಗಾಗಿ ಮಾಡಿಕೊಂಡಿರುವ ತಯಾರಿ ನೋಡಿ. ಮಗ ಹೆಚ್ ಡಿ ಕುಮಾರಸ್ವಾಮಿಯನ್ನು ಮುಂದೆ ಮಾಡಿ ತಾವು ಹಿಂದೆ ನಖಶಿಖಾಂತ ದ್ವೇಷಿಸುತ್ತಿದ್ದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಸಲು ವೇದಿಕೆ ಸಜ್ಜು ಮಾಡುತ್ತಿದ್ದಾರೆ.

ಅವರಿಗಿರುವ ದೊಡ್ಡ ಹರ್ಡಲ್ ಅಂದರೆ, ಸುಮಲತಾ ಅಂಬರೀಶ್. ಬಿಜೆಪಿ ಟಿಕೆಟ್ ನೀಡದಿದ್ದರೂ ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಹಾಲಿ ಸಂಸದೆ ಪಟ್ಟುಹಿಡಿದಿರುವ ಹಿನ್ನೆಲೆಯಲ್ಲಿ ಅವರ ಆಪ್ತರನ್ನು ತಮ್ಮತ್ತ ಸೆಳೆದುಕೊಳ್ಳುವ ಪ್ರಯತ್ನ ದೇವೇಗೌಡರು ಮಾಡುತ್ತಿದ್ದಾರೆ. ಮಂಡ್ಯದಲ್ಲಿ ನಡೆದ ಸಭೆಯೊಂದರಲ್ಲಿ ಸುಮಲತಾ ಆಪ್ತ ಇಂಡವಾಳು ಸಚ್ಚಿದಾನಂದರನ್ನು ಹೊಗಳಿ ತಮ್ಮೆಡೆ ವಾಲುವಂತೆ ಮಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ