ಇಬ್ರಾಹಿಂ ಅಂದಾಕ್ಷಣ ದೇವೇಗೌಡರು ಭುಸುಗುಡಲಾರಂಭಿಸಿದರು, ಅವರ ಮಾತಿನಲ್ಲಿ ಕೋಪ, ಅಸಹನೆ ಮತ್ತು ಹೇವರಿಕೆ!

ಅರುಣ್​ ಕುಮಾರ್​ ಬೆಳ್ಳಿ

Updated on: Oct 17, 2023 | 12:14 PM

ಜೆಡಿಎಸ್ ಪಕ್ಷದ ಭವಿಷ್ಯ ಕುತೂಹಲಕಾರಿ ಘಟ್ಟ ತಲುಪಿದೆ. ತಮ್ಮೊಂದಿಗೆ ಸಾವಿರಾರು ಕಾರ್ಯಕರ್ತರನ್ನು ಹೊದಿರುವ ಇಬ್ರಾಹಿಂ ಪಕ್ಷ ತಮ್ಮದು ಅಂತಿದ್ದಾರೆ. ಅದನ್ನು ಕಟ್ಟಿ ಬೆಳೆಸಿದ ದೇವೇಗೌಡರಿಗೆ ಇಬ್ರಾಹಿಂ ಮಾತುಗಳಿಂದ ಸಹಜವಾಗೇ ಕೋಪ ಬರುತ್ತದೆ. ಮುಂಬರುವ ದಿನಗಳಲ್ಲಿ ಪಕ್ಷದ ಒಡೆತನ ಕದನ ಕೋರ್ಟ್ ಮೆಟ್ಟಿಲು ಹತ್ತಿದರೆ ಆಶ್ಚರ್ಯವಿಲ್ಲ.

ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು ಮತ್ತು ಶಾಸಕರೊಂದಿಗೆ (JDS MLAs and workers) ಸಭೆ ನಡೆಸಿದ ಬಳಿಕ ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡ (HD Devegowda) ಅವರನ್ನು ಭೇಟಿಯಾಗುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಹೇಳುತ್ತಾರೆ. ಅದರೆ ದೇವೇಗೌಡರ ಮನೆಯಲ್ಲಿ ಅವರಿಗೆ ಎಂಥ ಸ್ವಾಗತ ಸಿಗಲಿದೆ ಅನ್ನೋದು ಮಾಜಿ ಪ್ರಧಾನಿ ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ನೀಡಿದ ಪ್ರತಿಕ್ರಿಯೆಯಿಂದ ಗೊತ್ತಾಗುತ್ತದೆ. ಸರ್, ಇಬ್ರಾಹಿಂ ಅವರು ಜೆಡಿಎಸ್ ಪಕ್ಷ ತಮಗೆ ಸೇರಿದ್ದು ಅಂತ ಹೇಳುತ್ತಿದ್ದಾರಲ್ಲ ಅಂತ ಮಾಧ್ಯಮದವರು ಬೆಂಗಳೂರಲ್ಲಿ ದೇವೇಗೌಡರನ್ನು ಕೇಳಿದಾಗ, ಅವರ ಅಸಹನೆ ಮತ್ತು ಕೋಪದಿಂದ ಸಿಡುಕಿದರು. ಹೋಗ್ರೀ ಆಚೆ ಅಂತ ಮಾಧ್ಯಮದವರಿಗೆ ಹೇಳಿದ್ದರಲ್ಲಿ ಇಬ್ರಾಹಿಂ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸಿಟ್ಟಿನ ಜೊತೆ ಅವರ ಮುಖದಲ್ಲಿ ಹೇವರಿಕೆಯೂ ವ್ಯಕ್ತವಾಯಿತು. ನಂತರ ಅವರು ವ್ಯಂಗ್ಯವಾಗಿ ನಕ್ಕು ಇನ್ನು 3-4 ದಿನಗಳಲ್ಲಿ ಎಲ್ಲ ಗೊತ್ತಾಗುತ್ತದೆ ಅಂತ ಗೊಣಗುತ್ತಾ ಹೇಳಿದರು. ಜೆಡಿಎಸ್ ಪಕ್ಷದ ಭವಿಷ್ಯ ಕುತೂಹಲಕಾರಿ ಘಟ್ಟ ತಲುಪಿದೆ. ತಮ್ಮೊಂದಿಗೆ ಸಾವಿರಾರು ಕಾರ್ಯಕರ್ತರನ್ನು ಹೊದಿರುವ ಇಬ್ರಾಹಿಂ ಪಕ್ಷ ತಮ್ಮದು ಅಂತಿದ್ದಾರೆ. ಅದನ್ನು ಕಟ್ಟಿ ಬೆಳೆಸಿದ ದೇವೇಗೌಡರಿಗೆ ಇಬ್ರಾಹಿಂ ಮಾತುಗಳಿಂದ ಸಹಜವಾಗೇ ಕೋಪ ಬರುತ್ತದೆ. ಮುಂಬರುವ ದಿನಗಳಲ್ಲಿ ಪಕ್ಷದ ಒಡೆತನ ಕದನ ಕೋರ್ಟ್ ಮೆಟ್ಟಿಲು ಹತ್ತಿದರೆ ಆಶ್ಚರ್ಯವಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.