Karnataka Assembly Polls 2023: ಹಾಸನಕ್ಕೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಹೆಚ್ ಡಿ ದೇವೇಗೌಡ ಅಕ್ಷರಶಃ ಧೂಳೆಬ್ಬಿಸಿದರು!

Updated on: Apr 20, 2023 | 5:21 PM

ಹಾಸನದಲ್ಲಿ ಸ್ವರೂಪ್ ಪ್ರಕಾಶ್ ಪರ ಮತಯಾಚನೆಗೆ ಅವರ ಇಡೀ ಕುಟುಂಬ; ಮಕ್ಕಳು-ಮೊಮ್ಮಕ್ಕಳು, ಸೊಸೆಯಂದಿರು ಇಳಿದಿರುವುದು ವಿಶೇಷ.

ಹಾಸನ: ಸಿನಿಮಾ ಧೂಳೆಬ್ಬಿಸುತ್ತಿದೆ, ಅಮೋಘ ಬ್ಯಾಟಿಂಗ್ ಮೂಲಕ ಧೂಳೆಬ್ಬಿಸಿದ ವಿರಾಟ್ ಕೊಹ್ಲಿ ಅಂತ ಹೇಳೋದನ್ನು ನಾವು ಕೇಳಿತ್ತಿರುತ್ತೇವೆ. ಧೂಳೆಬ್ಬಿಸುವ ಪದವನ್ನು ಹೀಗೆ ಕ್ರಿಯಾ ವಿಶೇಷಣವಾಗಿ ಬಳಸೋದುಂಟು. ಬೆಂಗಳೂರಿನಿಂದ ಹಾಸನಕ್ಕೆ ಚುನಾವಣಾ ಪ್ರಚಾರಕ್ಕೆಂದು ಹೆಲಿಕಾಪ್ಟರ್ ನಲ್ಲಿ (helicopter) ಆಗಮಿಸಿದ ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡ (HD Devegowda) ಅಕ್ಷರಶಃ ಧೂಳೆಬ್ಬಿಸಿದರು! ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಎದ್ದ ಧೂಳು ಒಂದೆರಡು ನಿಮಿಷಗಳ ಕಾಲ ಅಲ್ಲಿದ್ದ ಭದ್ರತಾ ಸಿಬ್ಬಂದಿ ಆಶ್ರಯಕ್ಕಾಗಿ ಓಡುವ ಸ್ಥಿತಿ ನಿರ್ಮಿಸಿತ್ತು. ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ದೇವೇಗೌಡ ಇದೇ ಮೊದಲ ಬಾರಿಗೆ ಬಹಿರಂಗ ಸಭೆಯೊಂದರಲ್ಲಿ ಪಾಲ್ಗೊಂಡಿದ್ದು. ಹಾಸನದಲ್ಲಿ ಸ್ವರೂಪ್ ಪ್ರಕಾಶ್ (Swaroop Prakash) ಪರ ಮತಯಾಚನೆಗೆ ಅವರ ಇಡೀ ಕುಟುಂಬ; ಮಕ್ಕಳು-ಮೊಮ್ಮಕ್ಕಳು, ಸೊಸೆಯಂದಿರು ಇಳಿದಿರುವುದು ವಿಶೇಷ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 20, 2023 05:21 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More