ಲೋಕಾಯುಕ್ತ ವರದಿಯಲ್ಲಿ ತನ್ನ ವಿರುದ್ಧ ಅವ್ಯವಹಾರದ ಪ್ರಸ್ತಾಪ ಅಗಿರುವುದನ್ನು ಅಂಗೀಕರಿಸಿದ ಕುಮಾರಸ್ವಾಮಿ

Updated on: Aug 21, 2024 | 1:42 PM

ತಾವು ವಿರೋಧ ಪಕ್ಷದಲ್ಲಿದ್ದಾಗ ಅಧಿಕಾರದಲ್ಲಿದ್ದ ಬೇರೆ ಬೇರೆ ಸರ್ಕಾರಗಳ ವಿರುದ್ಧ ದಾಖಲೆಗಳ ಸಮೇತ ಹಲವಾರು ಅಕ್ರಮ ಮತ್ತು ಕಾನೂನುಬಾಹಿರ ಕೃತ್ಯಗಳನ್ನು ಮಾಧ್ಯಮಗಳ ಮುಂದೆ ಇಟ್ಟಿದ್ದನ್ನು ಕುಮಾರಸ್ವಾಮಿ ನೆನಪಿಸಿಕೊಂಡರು. ಅಂದರೆ 2009 ರಿಂದ 2013 ರವರೆಗೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರದ ವಿರುದ್ಧವೂ ಅವರು ಆರೋಪಗಳನ್ನು ಮಾಡಿದ್ದರು!

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪತ್ರಿಕಾ ಗೋಷ್ಠಿ ನಡೆಸಿ ಮಾತಾಡುವುನ್ನು ನಿರೀಕ್ಷಿಸಲಾಗಿತ್ತು. ಅವರ ವಿರುದ್ಧ ಗಣಿಗಾರಿಕೆ ಲೀಸಿಂಗ್ ನಲ್ಲಿ ನಡೆದ ಅಕ್ರಮದ ಆರೋಪವನ್ನು ಲೋಕಾಯುಕ್ತ ಎಸ್ಐಟಿ ತನಿಖೆ ನಡೆಸಿ ಸಲ್ಲಿಸಿದ್ದ ಚಾರ್ಜ್​ಶೀಟ್ ಆಧಾರದ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ತಮ್ಮ ವರ್ಷನ್ ಜನತೆಯ ಮುಂದಿಡುವುದು ಅನಿವಾರ್ಯವಾಗಿತ್ತು. ಜಂತಕಲ್ ಮತ್ತು ಸಾಯಿ ವೆಂಕಟೇಶ್ವರ ಮೈನಿಂಗ್ ಪ್ರಕರಣಗಳಲ್ಲಿ ತನಗಿಂತ ಮೊದಲು ಮುಖ್ಯಮಂತ್ರಿಗಳಾಗಿದ್ದ ಎಸ್ ಎಂ ಕೃಷ್ಣ ಮತ್ತು ದಿವಂಗತ ಧರಂಸಿಂಗ್ ಅವರ ಹೆಸರುಗಳು ಸಹ ಪ್ರಸ್ತಾಪವಾಗಿವೆ ಎಂದು ಹೇಳಿದ ಅವರು ತನಿಖೆ ನಡೆಸಿದ್ದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಲ್ಲ ಎಂದು ಹೇಳಿದರು. ಲೋಕಾಯುಕ್ತ ಎಸ್ಐಟಿಯ ಚೀಫ್ ಆಗಿದ್ದ ಯುಬಿ ಸಿಂಗ್ ಅವರು ನೀಡಿರುವ ವರದಿಯಲ್ಲಿ, ಜಂತಕಲ್ ಮತ್ತು ಸಾಯಿ ವೆಂಕಟೇಶ್ವರ ಪ್ರಕರಣಗಳಲ್ಲಿ ಸ್ವಲ್ಪಮಟ್ಟಿನ ಅವ್ಯವಹಾರ ನಡೆದಿದ್ದು ಗೊತ್ತಾಗಿದೆ, ಆದರೆ ಎಸ್​ಐಟಿ ಮುಖ್ಯಮಂತ್ರಿಯ ವಿರುದ್ಧ ಕ್ರಮ ಜರುಗಿಸಬೇಕೆಂದು ಶಿಫಾರಸ್ಸು ಮಾಡಲ್ಲ, ಅದು ಸರ್ಕಾರದ ವಿವೇಚನೆ ಬಿಟ್ಟಿದ್ದು ಅಂತ ಉಲ್ಲೇಖವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕುಮಾರಸ್ವಾಮಿ ಅರೆಸ್ಟ್​ ಮಾಡಿ ಎಂದು ನಾನು ಎಲ್ಲೂ ಹೇಳಿಲ್ಲ, ಆದರೆ ಅಂತಹ ಸನ್ನಿವೇಶ ಬಂದ್ರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ -ಸಿಎಂ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More