AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಹೆಚ್​ಡಿ ಕುಮಾರಸ್ವಾಮಿ

ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಹೆಚ್​ಡಿ ಕುಮಾರಸ್ವಾಮಿ

Sunil MH
| Edited By: |

Updated on:Jun 13, 2026 | 4:58 PM

Share

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಲೂಟಿ ಸ್ಕೀಮ್ ಎಂದಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್​ ವಿರುದ್ಧ ವಾಗ್ದಾಳಿ ಮಾಡಿರುವ ಕುಮಾರಸ್ವಾಮಿ, ಫಲವತ್ತಾದ ಭೂಮಿ ಕಳೆದುಕೊಳ್ಳುವ ರೈತರ ಪರ ಧ್ವನಿ ಎತ್ತಿದ್ದಾರೆ. ರೈತರೊಂದಿಗೆ ಚರ್ಚಿಸದೆ ಯೋಜನೆಯನ್ನು ಮುಂದಕ್ಕೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು, ಜೂನ್​ 13: ಬಿಡದಿ ಟೌನ್​ಶಿಪ್ ವಿವಾದ​ ಸದ್ಯ ಸಿಎಂ ಡಿಕೆ ಶಿವಕುಮಾರ್​ ಮತ್ತು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಮಧ್ಯೆ ಮತ್ತೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಈ ಬಗ್ಗೆ ಮಾತನಾಡಿರುವ ಹೆಚ್​​ಡಿ ಕುಮಾರಸ್ವಾಮಿ, ಬಿಡದಿ ಟೌನ್​ಶಿಪ್​​ ಎಂದರೆ ಲೂಟಿ ಸ್ಕೀಮ್​​​ ಡೌಟೇ ಬೇಡ ಎಂದು ಹೇಳಿದ್ದಾರೆ. ಬಿಡದಿ ಟೌನ್​ಶಿಪ್ ಅವರ ಕನಸಿನ ಕೂಸಲ್ಲ, ನನ್ನ ಕನಸಿನ ಕೂಸು. ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಅವತ್ತಿನ ನನ್ನ ಉದ್ದೇಶ ಬೇರೆ ಇತ್ತು, ಆದರೆ ಇವತ್ತಿನ ಉದ್ದೇಶ ಬೇರೆಯೇ ಇದೆ. ಎಲ್ಲದಕ್ಕೂ ಅಜ್ಜಯ್ಯ ಬಳಿ ಹೋಗ್ತೀರಿ, ಅಜ್ಜಯ್ಯ ಹೇಳಿದ್ದಾರಾ ಟೌನ್​ಶಿಪ್ ಮಾಡಿ ರೈತರ ಒಕ್ಕಲೆಬ್ಬಿಸಿ ಎಂದು. ಜೆಡಿಎಸ್​ನಿಂದ ಪ್ರತಿಭಟನೆ, ಕಾನೂನು ಹೋರಾಟಕ್ಕೆ ಸಿದ್ಧರಾಗಿದ್ದೇವೆ. 450 ದಿನದಿಂದ ಹೋರಾಟ ಮಾಡುತ್ತಿರುವವರ ಧ್ವನಿಯಾಗಿದ್ದೇವೆ ಅಷ್ಟೇ. ರೈತ ಮುಖಂಡರನ್ನು ಬಂಧಿಸುವಂತೆ ಕೆಲಸವಾಗುತ್ತಿದೆ. ಅಗತ್ಯವಿದ್ದರೆ ನಾನೇ ಹೋರಾಟಕ್ಕೆ ಹೋಗುವೆ ಎಂದು ಹೆಚ್​​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jun 13, 2026 04:57 PM

Follow Us
Sunil MH
Sunil MH