ರಾಜಕೀಯ ವೈರತ್ವ ಬಿಟ್ಟು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಕುಮಾರಸ್ವಾಮಿ, ಡಿಕೆ ಶಿವಕುಮಾರ್!
ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ರಾಜಕೀಯ ವೈರತ್ವ ಬದಿಗಿಟ್ಟು ಇಬ್ಬರೂ ನಿರ್ಮಲಾನಂದ ಶ್ರೀಗಳ ಅಕ್ಕಪಕ್ಕ ಕುಳಿತುಕೊಂಡರು. ವಿಡಿಯೋ ಇಲ್ಲಿದೆ.
ಬೆಂಗಳೂರು, ಸೆಪ್ಟೆಂಬರ್ 20: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜೋಡೆತ್ತುಗಳು ಎಂದೇ ಗುರುತಿಸಿಕೊಂಡವರು ಹೆಚ್ಡಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್. ನಂತರ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಜತೆ ಜೆಡಿಎಸ್ ಕೈಜೋಡಿಸಿದ್ದರಿಂದ ಕುಮಾರಸ್ವಾಮಿ ಕೇಂದ್ರ ಸಚಿವರಾದರು. ಡಿಕೆ ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾದರು. ಅಲ್ಲಿಂದ ಉಭಯ ನಾಯಕರ ನಡುವೆ ತೀವ್ರ ರಾಜಕೀಯ ವಾಕ್ಸಮರ, ಬದ್ಧ ರಾಜಕೀಯ ವೈರತ್ವ ಏರ್ಪಟ್ಟಿತ್ತು. ಇದೀಗ ಉಭಯ ನಾಯಕರು ರಾಜಕೀಯ ವೈರತ್ವ ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಸಭೆಗೆ ಹಾಜರಾದ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್, ನಿರ್ಮಲಾನಂದ ಸ್ವಾಮೀಜಿ ಜತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

