ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!

Updated on: Dec 22, 2024 | 8:38 PM

ಮಂಡ್ಯದ 87ನೇ ಕನ್ನಡ ಸಮ್ಮೇಳನದ ಕೊನೆ ದಿನವಾದ ಇಂದು(ಡಿಸೆಂಬರ್ 22) ಚಲುವರಾಯಸ್ವಾಮಿ ಹಾಗೂ ಎಚ್​ಡಿ ಕುಮಾರಸ್ವಾಮಿ ವೇದಿಕೆ ಹಂಚಿಕೊಂಡಿದ್ದು, ಈ ವೇಳೆ ಕುಮಾರಣ್ಣ, ಚಲುವರಾಯಸ್ವಾಮಿ ಕಾರ್ಯವನ್ನು ಶ್ಲಾಘಿಸಿದ್ದಾರೆ. ವೇದಿಕೆ ಮೇಲೆ ಒಂದೇ ಒಂದು ಮಾತುಕತೆ ನಡೆಸದ ರಾಜಕೀಯ ಬದ್ಧ ವೈರಿಯಾಗಿರುವ ಚಲುವರಾಯಸ್ವಾಮಿ ಕೆಲಸವನ್ನು ಹೊಗಳಿರುವುದು ಅಚ್ಚರಿ ಮೂಡಿಸಿದೆ.

ಮಂಡ್ಯ, (ಡಿಸೆಂಬರ್ 22): ಸಚಿವ ಚಲುವರಾಯಸ್ವಾಮಿ ಹಾಗೂ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಕುಚಿಕು ಗೆಳೆಯರು. ಈ ಹಿಂದೆ ಜೆಡಿಎಸ್​ನಲ್ಲೇ ಇದ್ದ ಚಲುವರಾಯಸ್ವಾಮಿ ಕುಮಾರಸ್ವಾಮಿಗೆ ಅತ್ಯಾಪ್ತರಾಗಿದ್ದರು. ಆದ್ರೆ, ಬದಲಾದ ರಾಜಕೀಯ ವಿದ್ಯಾಮಾನಗಳಿಂದ ಚಲುವರಾಯಸ್ವಾಮಿ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು. ಅಲ್ಲಿಂದು ಕುಮಾರಣ್ಣ ಹಾಗೂ ಚಲುವರಾಸ್ವಾಮಿ ನಡುವೆ ಒಂದಲ್ಲ ಒಂದು ಕಾರಣಕ್ಕೆ ಮುಸುಕಿನ ಗುದ್ದಾಟಗಳು ನಡೆಯುತ್ತಲೇ ಬಂದಿವೆ. ಇಬ್ಬರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು ಉಂಟು. ಆದ್ರೆ, ಇಂದು(ಡಿಸೆಂಬರ್ 22) ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಉಭಯ ನಾಯಕರು ವೇದಿಕೆ ಹಂಚಿಕೊಂಡಿದ್ದು, ಈ ವೇಳೆ ಕುಮಾರಸ್ವಾಮಿ ಅವರು ಚಲುವರಾಯಸ್ವಾಮಿ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.

Published on: Dec 22, 2024 08:36 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More