ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಜೆಡಿಎಸ್ ಪಕ್ಷವನ್ನು ಅವಮಾನಿಸಿ ಮಾತನಾಡುವ ಸಿಎಂ ಸಿದ್ದರಾಮಯ್ಯ, ಹಿಂದೆ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡಿದ್ದರು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೆ, ಜೆಡಿಎಸ್ನಲ್ಲಿ ಅವರ ಹಿಂದಿನ ಪಾತ್ರ, ಚುನಾವಣಾ ಫಲಿತಾಂಶಗಳು ಮತ್ತು ಪಕ್ಷ ತೊರೆದ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಿದ್ದರಾಮಯ್ಯನವರು ಜೆಡಿಎಸ್ ತೊರೆದಾಗ ಕೆಲವೇ ಶಾಸಕರು ಅವರ ಜೊತೆ ಇದ್ದರು ಎಂದು ಕುಮಾರಸ್ವಾಮಿ ನೆನಪಿಸಿದ್ದಲ್ಲದೆ, ಕಾಂಗ್ರೆಸ್ ಬಿಟ್ಟು ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲುವಂತೆ ಸವಾಲು ಹಾಕಿದ್ದಾರೆ.
ಮೈಸೂರು, ಏಪ್ರಿಲ್ 10: ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡವರು ಎಂಬುದನ್ನು ಮರೆಯಬಾರದು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 1999ರ ಚುನಾವಣೆಯಲ್ಲಿ ಮತ್ತು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತಿದ್ದನ್ನು ಉಲ್ಲೇಖಿಸಿದರು. ಜನ ಅವರನ್ನು ರಾಜಕೀಯದಿಂದ ದೂರವಿಟ್ಟಿದ್ದರು ಎಂದು ಹೇಳಿದರು. ಅಲ್ಲದೆ, ಕಾಂಗ್ರೆಸ್ ತೊರೆದು ಐದರಿಂದ ಹತ್ತು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದು ತೋರಿಸುವಂತೆ ಸವಾಲು ಹಾಕಿದರು.
Loading...
Unable to load recommendations.
Follow Us
