Solar Power irregularity: ಧಮ್ಮಿದ್ರೆ ಸಿದ್ದರಾಮಯ್ಯ ತನಿಖೆ ಮಾಡಿಸಲಿ ಎನ್ನುವ ಹೆಚ್ ಡಿ ಕುಮಾರಸ್ವಾಮಿ ತಾವು ಸಿಎಂ ಆಗಿದ್ದಾಗ ಗೌಣವಾಗಿದ್ದು ಯಾಕೆ?

ಅರುಣ್​ ಕುಮಾರ್​ ಬೆಳ್ಳಿ

Updated on: Jun 08, 2023 | 5:39 PM

ಸಿದ್ದರಾಮಯ್ಯ ನಂತರ ರಾಜ್ಯದ ಮುಖ್ಯಮಂತ್ರಿಯಾಗಿದ್ದು ಕುಮಾರಸ್ವಾಮಿಯವರೇ! ಆಗ ಯಾಕೆ ಅವರು ತನಿಖೆ ಮಾಡಿಸಲಿಲ್ಲ?

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಹಿಟ್ ಅಂಡ್ ರನ್ ಸ್ವಭಾವದವರು ಅಂತ ಹಿಂದೆಯೂ ಸಾಬೀತಾಗಿದೆ. ತಮ್ಮ ಎದುರಾಳಿಗಳ ಮೇಲೆ ಅವರು ಆರೋಪಗಳನ್ನು ಮಾಡುತ್ತಾರೆಯೇ ಹೊರತು ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಪುಷ್ಠೀಕರಿಸುವುದಿಲ್ಲ. ಅವರಿಲ್ಲಿ ಮಾತಾಡುತ್ತಿರುವುದನ್ನೇ ಕೇಳಿಸಿಕೊಳ್ಳಿ. ಸಿದ್ದರಾಮಯ್ಯನವರ ಹಿಂದಿನ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ (DK Shivakumar) ಸೋಲಾರ್ ಪವರ್ ಗಾಗಿ ಪ್ರತಿ ಯುನಿಟ್ ಗೆ ರೂ. 9.65 ರಂತೆ ಒಪ್ಪಂದ ಮಾಡಿಕೊಳ್ಳುತ್ತಾರೆ, ಆದರೆ ಬೇರೆ ರಾಜ್ಯಗಳಲ್ಲಿ ಅದರ ದರ ಪ್ರತಿ ಯುನಿಟ್ ಗೆ ರೂ. 2-3 ಮಾತ್ರ ಇತ್ತು ಅಂತ ಆರೋಪಿಸುವ ಕುಮಾರಸ್ವಾಮಿ, ಸಿದ್ದರಾಮಯ್ಯನವರಿಗೆ (Siddaramaiah) ತಾಕತ್ತಿದ್ದರೆ ತನಿಖೆ ಮಾಡಿಸಲಿ ಎಂದು ಹೇಳುತ್ತಾರೆ. ಆದರೆ ಒಂದು ಸಂಗತಿಯನ್ನು ಮರೆಮಾಚುತ್ತಾರೆ. ಸಿದ್ದರಾಮಯ್ಯ ನಂತರ ರಾಜ್ಯದ ಮುಖ್ಯಮಂತ್ರಿಯಾಗಿದ್ದು ಕುಮಾರಸ್ವಾಮಿಯವರೇ! ಆಗ ಯಾಕೆ ಅವರು ತನಿಖೆ ಮಾಡಿಸಲಿಲ್ಲ? ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿದ್ದು ಕಾಂಗ್ರೆಸ್ ಪಕ್ಷದ ಕೃಪಕಟಾಕ್ಷದಿಂದ ಅಂತಲೇ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.