ಹೊಸ ಸಂಪುಟದಿಂದ ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ಆಗ್ರಹಿಸಿದ್ದು ಯಾವ ಸಚಿವಗೆ? ಯಾಕೆ?

ಸಾಧು ಶ್ರೀನಾಥ್​

Updated on: Jul 06, 2023 | 1:43 PM

ವರ್ಗಾವಣೆ ದಂಧೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ತಮ್ಮ ಹೊಸ ಸಂಪುಟದಿಂದ ಸಚಿವ ಎನ್​​ ಚಲುವರಾಯಸ್ವಾಮಿಯನ್ನು ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ಆಗ್ರಹಿಸಿದರು.

ನಾಗಮಂಗಲ KSRTC ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನ ಪ್ರಕರಣದಲ್ಲಿ KSRTC ಚಾಲಕ ಜಗದೀಶ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತ ತನ್ನ ಡೆತ್​ನೋಟ್​​ನಲ್ಲಿ ಸಚಿವ ಎನ್​​ ಚಲುವರಾಯಸ್ವಾಮಿ ಹೆಸರು ಪ್ರಸ್ತಾಪಿಸಿದ್ದಾರೆ. ಆದರೆ ಈವರೆಗೂ ಎಫ್​​ಐಆರ್ ದಾಖಲಾಗಿಲ್ಲ ಎಂದು ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವರ್ಗಾವಣೆ ದಂಧೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ಕಾಂಗ್ರೆಸ್​ ಸರ್ಕಾರ ರಾಜಕೀಯ ದ್ವೇಷ ಮಾಡುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. ಈ ಹಿನ್ನೆಲೆಯಲ್ಲಿ, ತಮ್ಮ ಹೊಸ ಸಂಪುಟದಿಂದ ಸಚಿವ ಎನ್​​ ಚಲುವರಾಯಸ್ವಾಮಿಯನ್ನು ಹೊರಗಿಡುವಂತೆ ಸಿಎಂ ಸಿದ್ದರಾಮಯ್ಯಗೆ ಹೆಚ್​​ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಇನ್ನು ನಾಗಮಂಗಲ KSRTC ಚಾಲಕ ಜಗದೀಶ್​​ ಆತ್ಮಹತ್ಯೆಗೆ ಯತ್ನ ಪ್ರಕರಣದಲ್ಲಿ ಡೆತ್​ನೋಟ್​​ನಲ್ಲಿ ಎನ್​. ಚಲುವರಾಯಸ್ವಾಮಿ ಹೆಸರು ಪ್ರಸ್ತಾಪ ವಿಚಾರವಾಗಿ ವಿಧಾನಸೌಧದ ಸಮೀಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಈ ಬಗ್ಗೆ ನನಗೆ ಗೊತ್ತಿಲ್ಲ, ಅಧಿಕಾರಿಗಳ ಮೂಲಕ ತಿಳಿದುಕೊಳ್ಳುತ್ತೇನೆ. ಆತನ ಪತ್ನಿ ಪಂಚಾಯಿತಿ ಸದಸ್ಯೆ, ಅಧ್ಯಕ್ಷರಾಗಲು ಪ್ರಯತ್ನಿಸುತ್ತಿದ್ದಾರೆ. ಇದು ರಾಜಕೀಯ ಇರಬಹುದು ಎಂಬುದು ನನಗೆ ಅನಿಸುತ್ತದೆ ಎಂದಿದ್ದಾರೆ.

Published on: Jul 06, 2023 01:42 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು