ಪೆನ್ ಡ್ರೈವ್ ಬಗ್ಗೆ ಪ್ರಸ್ತಾಪಿಸಿದ ಹೆಚ್ ಡಿ ಕುಮಾರಸ್ವಾಮಿ ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ರಿಲೀಸ್ ಮಾಡಿದರೂ ವ್ಯರ್ಥ ಅನ್ನುತ್ತಾರೆ!

ನೀರಜಾ ಚೌಧುರಿ ಬರೆದಿರುವ ಹೌ ಪ್ರೈಮ್ ಮಿನಿಸ್ಟರ್ಸ್ ಡಿಸೈಡ್ ಪುಸ್ತಕವನ್ನು ತೋರಿಸಿ ಅದರಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿ, ಚಂದ್ರಶೇಖರ್, ವಿಪಿ ಸಿಂಗ್ ಮೊದಲಾದವರೆಲ್ಲ ಪ್ರಧಾನ ಮಂತ್ರಿ ಸ್ಥಾನ ಹೋದ ಮೇಲೆ ಏನು ಹೇಳಿದ್ದರು ಅನ್ನೋದನ್ನು ದಾಖಲಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಪೆನ್ ಡ್ರೈವ್ ಬಗ್ಗೆ ಪ್ರಸ್ತಾಪಿಸಿದ ಹೆಚ್ ಡಿ ಕುಮಾರಸ್ವಾಮಿ ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ರಿಲೀಸ್ ಮಾಡಿದರೂ ವ್ಯರ್ಥ ಅನ್ನುತ್ತಾರೆ!
|

Updated on:Aug 15, 2023 | 2:06 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ನಗರದ ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ಸುದ್ದಿಗೊಷ್ಟಿಯೊಂದನ್ನು ನಡೆಸಿ ಮಾತಾಡುವಾಗ ಖ್ಯಾತ ಪತ್ರಕರ್ತೆ ನೀರಜಾ ಚೌಧುರಿ (Neerja Choudhury) ಅವರು ಬರೆದಿರುವ ಹೌ ಪ್ರೈಮ್ ಮಿನಿಸ್ಟರ್ಸ್ ಡಿಸೈಡ್ (How Prime Ministers Decide) ಪುಸ್ತಕವನ್ನು ತೋರಿಸಿ ಅದರಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿ, ಚಂದ್ರಶೇಖರ್, ವಿಪಿ ಸಿಂಗ್ ಮೊದಲಾದವರೆಲ್ಲ ಪ್ರಧಾನ ಮಂತ್ರಿ ಸ್ಥಾನ ಹೋದ ಮೇಲೆ ಏನು ಹೇಳಿದ್ದರು ಅನ್ನೋದನ್ನು ದಾಖಲಿಸಿದ್ದಾರೆ. ಹಾಗೆಯೇ 1977 ರಲ್ಲಿ ಇಂದಿರಾ ಗಾಂಧಿಯವರು ಅಧಿಕಾರ ಕಳೆದುಕೊಂಡ ಬಳಿಕ ಏನು ಹೇಳಿದ್ದರು ಅನ್ನೋದನ್ನೂ ಉಲ್ಲೇಖಿಸಿದ್ದಾರೆ. ಹೆಚ್ ಡಿ ದೇವೇಗೌಡರ ಬಗ್ಗೆ ಇಲ್ಲೇಖ ಇದೆಯಾ ಇಲ್ಲವಾ ಅಂತ ಅವರು ಹೇಳಲಿಲ್ಲ. ನಂತರ ತಮ್ಮ ಪೆನ್ ಡ್ರೈವ್ ವಿಷಯಕ್ಕೆ ಬಂದ ಕುಮಾರಸ್ವಾಮಿ, ಅದು ಖಾಲಿ ಅಲ್ಲ, ಅದರಲ್ಲಿ ಸಾಕಷ್ಟು ವಿಷಯವಿದೆ ಅಂತ ಹೇಳಿ, ಅದನ್ನು ಬಿಡಗಡೆ ಮಾಡಿದರೂ ಸರ್ಕಾರ ಅಧಿಕಾರಿಗಳನ್ನು ಹೆದರಿಸಿ ಬೆದರಿಸಿ ಬಾಯಿ ಮುಚ್ಚಿಸುತ್ತದೆ, ಪಾಪ ಅವರ ಬದುಕು ಹಾಳು ಮಾಡುವುದು ಸರಿಯಲ್ಲ ಎನ್ನುತ್ತಾರೆ. ಇತ್ತೀಚಿಗೆ ಕುಮಾರಸ್ವಾಮಿ ಮಾತಾಡುವಾಗ ಸ್ಪಷ್ಟತೆಯೇ ಇರೋದಿಲ್ಲ. ಏನೋ ಹೇಳಹೋಗಿ ಏನೋ ಮಾತಾಡಿ ಕೊನೆಗೆಲ್ಲೋ ಮುಗಿಸಿಬಿಡುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Tue, 15 August 23

Follow us
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ