AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯರ ಹಿರಿಮಗನನ್ನು ಪ್ರಸ್ತಾಪಿಸಿದ ಹೆಚ್ ಡಿ ಕುಮಾರಸ್ವಾಮಿ!

ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯರ ಹಿರಿಮಗನನ್ನು ಪ್ರಸ್ತಾಪಿಸಿದ ಹೆಚ್ ಡಿ ಕುಮಾರಸ್ವಾಮಿ!

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 28, 2024 | 3:46 PM

Share

ಹಿಂದೆಯೂ ಕುಮಾರಸ್ವಾಮಿ ಪ್ರಕರಣವೊಂದರಲ್ಲಿ ರಾಕೇಶ್ ಸಿದ್ದರಾಮಯ್ಯ ಹೆಸರನ್ನು ಪ್ರಸ್ತಾಪಿಸಿ ತೀವ್ರ ಸ್ವರೂಪದ ಟೀಕೆ ಎದುರಿಸಿದ್ದರು. ಸಿದ್ದರಾಮಯ್ಯ ಕುಟುಂಬ ಸರ್ಕಾರಿ ಜಮೀನನ್ನು ಲಪಟಾಯಿಸಿ ಅದನ್ನು ಮುಡಾ ಸ್ವಾಧೀನಪಡಿಸಿಕೊಂಡ ನಂತರ ಬದಲೀ ಸೈಟುಗಳನ್ನು ಪಡೆದಿದೆ ಎಂದು ಕೇಂದ್ರ ಸಚಿವ ಹೇಳಿದರು.

ಮಂಡ್ಯ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗತಿಸಿ ಹೋಗಿರುವ ಸಿದ್ದರಾಮಯ್ಯನವರ ಹಿರಿಯ ಮಗನನ್ನು ಮತ್ತೊಮ್ಮೆ ಹಗರಣವೊಂದರಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದರು. ಮುಡಾ ಹಗರಣದ ಬಗ್ಗೆ ಮಾತಾಡಿದ ಅವರು ಜಮೀನು ಮಾಲೀಕ ನಿಂಗ ಹೆಸರಿನ ವ್ಯಕ್ತಿ ಸತ್ತು 20 ವರ್ಷಗಳಾಗಿದ್ದರೂ ಆ ವಿವಾದಾತ್ಮಕ ಜಮೀನನ್ನು ದಿವಂಗತ ರಾಕೇಶ್ ಸಿದ್ದರಾಮಯ್ಯ ಹೆಸರು ಉಲ್ಲೇಖೀಸದೆ ಸಿಎಂ ಹಿರಿಮಗ ಡಿನೋಟಿಫೈ ಮಾಡಿಸಿದರೆ ಎಂದು ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ! ಮುಡಾ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ