ಬಿಜೆಪಿ ಜೊತೆ ಹೊಂದಾಣಿಕೆ ಬಳಿಕ ನಿಖಿಲ್ ಕುಮಾರಸ್ವಾಮಿಗೆ ಜವಾಬ್ದಾರಿಗಳನ್ನು ವಹಿಸುತ್ತಿರುವ ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 28, 2023 | 11:32 AM

ಕೆಲ ವಾರಗಳ ಹಿಂದೆ, ರಾಜ್ಯದಲ್ಲಿ ಕಾವೇರಿ ನದಿ ನೀರಿಗಾಗಿ ಉಗ್ರಸ್ವರೂಪದ ಹೋರಾಟ ನಡೆಯುತ್ತಿದ್ದಾಗ ನಾಡಿನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ಕುರಿತು ಮಾತುಕತೆ ನಡೆಸಲು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ನಿಖಿಲ್ ನನ್ನೂ ಸಂಗಡ ಕರೆದೊಯ್ದಿದ್ದರು.

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು (Nikhil Kumaraswamy) ತಮ್ಮ ಉತ್ತರಾಧಿಕಾರಿಯಾಗಿ ಮತ್ತು ಪೂರ್ಣ ಪ್ರಮಾಣದ ರಾಜಕಾರಣಿ (full-fledged politician) ಮಾಡಲು ಪಣತೊಟ್ಟಿರುವಂತಿದೆ. ಅದರಲ್ಲೂ ವಿಶೇಷವಾಗಿ ಬಿಜೆಪಿ ಜತೆ ಮೈತ್ರಿ ಮಾತುಕತೆ ನಡೆದ ಬಳಿಕ ನಿಖಿಲ್ ಗೆ ಕೆಲ ಮಹತ್ವದ ಜವಾಬ್ದಾರಿಗಳನ್ನು ಕುಮಾರಸ್ವಾಮಿ ವಹಿಸಿಕೊಡುತ್ತಿದ್ದಾರೆ. ಮಾತುಕತೆಯ ಮುಂದುವರಿದ ಭಾಗವಾಗಿ ನಿಖಿಲ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ನಿನ್ನೆ ಲಖನೌನಲ್ಲಿ ಭೇಟಿಯಾಗಿದ್ದಾರೆ. ಯೋಗಿಗೆ ಅವರು ರಾಮ, ಲಕ್ಷ್ಮಣ ಮತ್ತು ಸೀತೆಯ ವಿಗ್ರಹಗಳಿರುವ ಫ್ರೇಮನ್ನು ಉಡುಗೊರೆಯಾಗಿ ನೀಡಿದ್ದಾರೆ. ನಿಮಗೆ ನೆನಪಿರಬಹುದು. ಕೆಲ ವಾರಗಳ ಹಿಂದೆ, ರಾಜ್ಯದಲ್ಲಿ ಕಾವೇರಿ ನದಿ ನೀರಿಗಾಗಿ ಉಗ್ರಸ್ವರೂಪದ ಹೋರಾಟ ನಡೆಯುತ್ತಿದ್ದಾಗ ನಾಡಿನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ಕುರಿತು ಮಾತುಕತೆ ನಡೆಸಲು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ನಿಖಿಲ್ ನನ್ನೂ ಸಂಗಡ ಕರೆದೊಯ್ದಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.