ತಮ್ಮನ್ನು ಅಧಿಕಾರದಿಂದ ಬೀಳಿಸಿದವರ ಜೊತೆ ಕುಮಾರಸ್ವಾಮಿ ಕೈ ಜೋಡಿಸಿದ್ದಾರೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Aug 09, 2025 | 6:35 PM

ಕಾಂಗ್ರೆಸ್ 2023 ರಲ್ಲಿ ಪುನಃ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ನಾಯಕರು ನಮ್ಮ ಸರ್ಕಾರವನ್ನು ಟೀಕಿಸುತ್ತಿದ್ದಾರೆ ಮತ್ತು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ, ನಾವು ಐದು ಗ್ಯಾರಂಟಿ ಯೋಜನಗೆಳನ್ನು ಘೋಷಿಸಿ ಜಾರಿಗೆ ತಂದಿದ್ದು ಅವರಿಗೆ ಸಹಸಿಕೊಳ್ಳಲಾಗುತ್ತಿಲ್ಲ, ಸರ್ಕಾರದ ಬೊಕ್ಕಸ ಖಾಲಿಯಾಗಿದೆ, ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು, ಆಗಸ್ಟ್ 9: ನಗರದಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೊಳಿಸಿದ ಭಾಗ್ಯಗಳು ಮತ್ತು ಈಡೇರಿಸಿದ ಭರವಸೆಗಳ (Congress manifesto) ಬಗ್ಗೆ ಮತ್ತೊಮ್ಮೆ ಹೇಳಿದರು. ಅಷ್ಟೆಲ್ಲ ಭಾಗ್ಯಗಳನ್ನು ನೀಡಿದಾಗ್ಯೂ ಜನ ಪುನಃ ಅಧಿಕಾರ ನೀಡಲಿಲ್ಲ, ಹಾಗಾಗಿ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಜೊತೆಗೂಡಿ ಸಮ್ಮಿಶ್ರ ಸರ್ಕಾರ ರಚಿಸಿದೆವು, ಅದರೆ ಬಿಜೆಪಿ ಅಪರೇಶನ್ ಕಮಲ ನಡೆಸಿ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂತು ಎಂದರು. ಆಗೆಲ್ಲ ಬಿಜೆಪಿಯನ್ನು ವಾಚಾಮಗೋಚರವಾಗಿ ತೆಗಳುತ್ತಿದ್ದ ಕುಮಾರಸ್ವಾಮಿ ಮತ್ತು ಹೆಚ್ ಡಿ ದೇವೇಗೌಡ ಈಗ ಅಧಿಕಾರಕ್ಕಾಗಿ ಅವರೊಂದಿಗೆ ಕೈ ಜೋಡಿಸಿದ್ದಾರೆ ಎಂದ ಸಿದ್ದರಾಮಯ್ಯ ತಾನು ಕುಮಾರಸ್ವಾಮಿ ವಿಷಯದಲ್ಲಿ ಹೆಚ್ಚು ಮಾತಾಡುವುದನ್ನು ಇಷ್ಟಪಡಲ್ಲ ಎಂದರು. ಜೆಡಿಎಸ್ ಪಕ್ಷ ಹುಟ್ಟಿದ್ದೇ ಸಾಮಾಜಿಕ ನ್ಯಾಯ, ಜಾತ್ಯಾತೀತ ತತ್ವ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವು ಎಂಬ ಆಶಯಳೊಂದಿಗೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:  ವಿಕ್ಟೋರಿಯ ಆಸ್ಪತ್ರೆಯಲ್ಲಿ ಸಿಗುತ್ತಿರುವ ಚಿಕಿತ್ಸೆ ಮತ್ತು ವ್ಯವಸ್ಥೆ ಬಗ್ಗೆ ರೋಗಿಗಳು ತೃಪ್ತಿ ವ್ಯಕ್ತಪಡಿಸಿದ್ದಾರೆ: ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.