ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು

| Updated By: ಗಂಗಾಧರ​ ಬ. ಸಾಬೋಜಿ

Updated on: Oct 13, 2024 | 5:54 PM

ತಮ್ಮ ವಿರುದ್ಧ ಎಡಿಜಿಪಿ ಚಂದ್ರಶೇಖರ್​ ದೂರು ನೀಡಿದ ವಿಚಾರವಾಗಿ ದಾವಣಗೆರೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ದೂರು ಕೊಟ್ಟಿದ್ದಾರೆ. ದೂರು ಕೊಡುವಂತೆ ಮಾಡಿದ್ದು ಯಾರು ಅಂತ ಎಲ್ಲಾ ಗೊತ್ತಿರುವ ವಿಷಯ. ನ್ಯಾಯಾಲದಲ್ಲಿ ಹೋರಾಡೋಣ ಎಂದು ಹೇಳಿದ್ದಾರೆ.  

ದಾವಣಗೆರೆ, ಅಕ್ಟೋಬರ್​ 13: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖರ್ (ADGP Chandrashekar) ಮಧ್ಯೆ ಜಟಾಪಟಿ ಮುಂದುವರೆದಿದೆ. ಈಗಾಗಲೇ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಚಂದ್ರಶೇಖರ್​ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಅದರ ಬಗ್ಗೆ ಚರ್ಚೆ ಬೇಡ. ಪ್ರಕರಣ ನ್ಯಾಯಾಲದಲ್ಲಿ ಇದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊತ್ತಾಗುತ್ತದೆ. ನ್ಯಾಯಾಲದಲ್ಲಿ ಹೋರಾಡೋಣ. ದೂರು ಕೊಟ್ಟಿದ್ದಾರೆ. ದೂರು ಕೊಡುವಂತೆ ಮಾಡಿದ್ದು ಯಾರು ಅಂತ ಎಲ್ಲಾ ಗೊತ್ತಿರುವ ವಿಷಯ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on