ಹಳೆಯ ದೋಸ್ತಿ ಜಮೀರ್ ಆಹ್ಮದ್ ಖಾನ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್ ಡಿ ಕುಮಾರಸ್ವಾಮಿ

ಅಲ್ಪಸಂಖ್ಯಾತರ ಉದ್ಧಾರಕ ಎಂದು ದೊಡ್ಡದಾಗಿ ಪೋಸುಗಳನ್ನು ನೀಡುವ ನಾಯಕ ಬಿಜೆಪಿಯ ಐವರು ಬೆಂಬಲಕ್ಕೆ ಬಂದರೆ ಇನ್ನೂ ಐವರನ್ನು ಆ ಕಡೆ ಕಳಿಸ್ತೀವಿ ಅಂತ ವಿಧಾನ ಸಭೆಯಲ್ಲಿ ಹೇಳಿದ್ದರು ಎಂದ ಕುಮಾರಸ್ವಾಮಿ, ಇತಿಹಾಸ ತೆಗೆದು ನೋಡಿ ಗೊತ್ತಾಗುತ್ತದೆ ಎಂದು ಮಾಧ್ಯಮದವರಿಗೆ ಹೇಳಿದರು

ಹಳೆಯ ದೋಸ್ತಿ ಜಮೀರ್ ಆಹ್ಮದ್ ಖಾನ್ ರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೆಚ್ ಡಿ ಕುಮಾರಸ್ವಾಮಿ
|

Updated on: Sep 27, 2023 | 2:01 PM

ಬೆಂಗಳೂರು: ನಗರದಲ್ಲಿಂದು ಜೆಡಿಎಸ್ ನಾಯಕ ಹೆಚ್ ಡಿ ದೇವೇಗೌಡ (HD Devegowda) ಅವರು ನಡೆಸಿದ ಪತ್ರಿಕಾ ಗೋಷ್ಟಿಯಲ್ಲಿ ಮಾತಾಡಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ತಮ್ಮ ಹಳೆಯ ದೋಸ್ತಿ ಮತ್ತು ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವರಾಗಿರುವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಹಿಂದಿನ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾಗ ತನಗೆ ಆಪ್ತರಾಗಿದ್ದ ಬಿಜೆಪಿಯ ಐವರು ಶಾಸಕರು ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಲು ಮುಂದೆ ಬಂದಿದ್ದರು. ಆಗ ಅಲ್ಪಸಂಖ್ಯಾತರ ಉದ್ಧಾರಕ ಎಂದು ದೊಡ್ಡದಾಗಿ ಪೋಸುಗಳನ್ನು ನೀಡುವ ನಾಯಕ (ಕುಮಾರಸ್ವಾಮಿಯವರು ಜಮೀರ್ ಆಹ್ಮದ್ ಹೆಸರು ಉಲ್ಲೇಖಿಸದೆ ದಾಳಿ ನಡೆಸಿದರು) ಬಿಜೆಪಿಯ ಐವರು ಬೆಂಬಲಕ್ಕೆ ಬಂದರೆ ಇನ್ನೂ ಐವರನ್ನು ಆ ಕಡೆ ಕಳಿಸ್ತೀವಿ ಅಂತ ವಿಧಾನ ಸಭೆಯಲ್ಲಿ ಹೇಳಿದ್ದರು ಎಂದ ಕುಮಾರಸ್ವಾಮಿ, ಇತಿಹಾಸ ತೆಗೆದು ನೋಡಿ ಗೊತ್ತಾಗುತ್ತದೆ ಎಂದು ಮಾಧ್ಯಮದವರಿಗೆ ಹೇಳಿದರು. ಅವರು ಹೇಳುವ ತಾತ್ಪರ್ಯ ಮೈತ್ರಿ ಸರ್ಕಾರದ ಪತನಕ್ಕೆ ಕಾಂಗ್ರೆಸ್ ನಾಯಕರು ಅನ್ನುವಂತಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ