ವಿವಾದಕ್ಕೀಡಾಗಿದ್ದ ಕೆರಗೋಡುನಲ್ಲಿ ಕುಮಾರಸ್ವಾಮಿ ಮತಬೇಟೆ, ರಾಮನವಮಿ ಪ್ರಯುಕ್ತ ಹನಮ ದೇವಸ್ಥಾನಲ್ಲಿ ಪೂಜೆ

ಗುಡಿಯ ಆವರಣದಲ್ಲಿ ಕುಮಾರಸ್ವಾಮಿಯವರು ತಾಯಂದಿರೊಂದಿಗೆ ಬಂದಿದ್ದ ಮಕ್ಕಳ ಕೆನ್ನೆ ತಟ್ಟಿ, ತಲೆ ನೇವರಿಸಿ ಪ್ರೀತಿ ವ್ಯಕ್ತಪಡಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಗೆದ್ದೇ ತೀರಬೇಕೆಂಬ ಛಲ ಕುಮಾರಸ್ವಾಮಿಯವರಲ್ಲಿದ್ದರೆ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರು ಸಂಕಲ್ಪ ಮಾಡಿಕೊಂಡಿದ್ದಾರೆ.

ವಿವಾದಕ್ಕೀಡಾಗಿದ್ದ ಕೆರಗೋಡುನಲ್ಲಿ ಕುಮಾರಸ್ವಾಮಿ ಮತಬೇಟೆ, ರಾಮನವಮಿ ಪ್ರಯುಕ್ತ ಹನಮ ದೇವಸ್ಥಾನಲ್ಲಿ ಪೂಜೆ
|

Updated on: Apr 17, 2024 | 12:08 PM

ಮಂಡ್ಯ: ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮ ಕಳೆದ ತಿಂಗಳು ಸುದ್ದಿಯಲ್ಲಿತ್ತು. ಹನುಮ ಧ್ವಜವನ್ನು (Hanuman flag) ಕೆಳಗಿಳಿಸಿ ರಾಷ್ಟ್ರಧ್ವಜ (National flag) ಹಾರಿಸುವಂತೆ ಕಾಂಗ್ರೆಸ್ ಸರ್ಕಾರದ ಆದೇಶ ವಿರುದ್ಧ ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಒಂದೆರಡು ದಿನಗಳ ಕಾಲ ಮಂಡ್ಯ ಜಿಲ್ಲೆ ಪ್ರಕ್ಷುಬ್ದವಾಗಿದ್ದನ್ನು ನಾವು ವರದಿ ಮಾಡಿದ್ದೇವೆ. ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇಂದು ಗ್ರಾಮದಲ್ಲಿ ಮತಯಾಚಿಸುವ ಮೊದಲು, ಅಲ್ಲಿನ ಹನುಮ ದೇವಸ್ಥಾನದವರೆಗೆ ಮೆರವಣಿಗೆಯಲ್ಲ್ಲಿ ಹೋದರು. ರಾಮನವಮಿ ಪ್ರಯುಕ್ತ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ನೆರೆದಿದ್ದ ನೂರಾರು ಭಕ್ತರಿಗೆ ಹಬ್ಬದ ಶುಭಾಷಯ ಕೋರಿದರು. ಹೆಗಲ ಮೇಲೆ ಕೇಸರಿ ಶಲ್ಯ ಧರಿಸಿ ಅವರು ಮಹಿಳೆಯರಿಂದ ಆರತಿ ಬೆಳಗಿಸಿಕೊಳ್ಳುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಗುಡಿಯ ಆವರಣದಲ್ಲಿ ಕುಮಾರಸ್ವಾಮಿಯವರು ತಾಯಂದಿರೊಂದಿಗೆ ಬಂದಿದ್ದ ಮಕ್ಕಳ ಕೆನ್ನೆ ತಟ್ಟಿ, ತಲೆ ನೇವರಿಸಿ ಪ್ರೀತಿ ವ್ಯಕ್ತಪಡಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಗೆದ್ದೇ ತೀರಬೇಕೆಂಬ ಛಲ ಕುಮಾರಸ್ವಾಮಿಯವರಲ್ಲಿದ್ದರೆ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರು ಸಂಕಲ್ಪ ಮಾಡಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮಹಿಳೆಯರಿಗೆ ಅಪಮಾನ ಆರೋಪ: ಎಚ್​ಡಿ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ