Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಪಂಚರತ್ನ ಕಾರ್ಯಾಗಾರ: ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಹೆಚ್ ಡಿ ಕುಮಾರಸ್ವಾಮಿ

ಮೈಸೂರಲ್ಲಿ ಪಂಚರತ್ನ ಕಾರ್ಯಾಗಾರ: ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
| Updated By: Digi Tech Desk

Updated on:Oct 20, 2022 | 2:41 PM

ಹೆಚ್ ಡಿ ಕುಮಾರಸ್ವಾಮಿ ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಸುಮಾರು 150 ಕಾರ್ಯಕರ್ತರೊಡನೆ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.

ಮೈಸೂರು: ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದಾರೆ, ಬಿಜೆಪಿಯವರು ಜನಸಂಕಲ್ಪ ಯಾತ್ರೆ ಕೈಗೊಂಡಿದ್ದಾರೆ ಆದರೆ ಜೆಡಿ (ಎಸ್) (JDS) ಯಾತ್ರೆಗಳ ಗೋಜಿಗೆ ಹೋಗದೆ ಮೈಸೂರಲ್ಲಿ ಗುರುವಾರದಿಂದ ಪಂಚರತ್ನ ಕಾರ್ಯಾಗಾರ (Pancharatna Workshop) ಹಮ್ಮಿಕೊಂಡಿದೆ. ಅದಕ್ಕೆ ಪೂರ್ವಭಾವಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಸುಮಾರು 150 ಕಾರ್ಯಕರ್ತರೊಡನೆ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು

Published on: Oct 20, 2022 11:50 AM