AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karwar: ಒಂದೇ ದಿನ ದೇವಸ್ಥಾನ, ದರ್ಗಾ ಮತ್ತು ಚರ್ಚ್​ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಹೆಚ್ ಡಿ ಕುಮಾರಸ್ವಾಮಿ

Karwar: ಒಂದೇ ದಿನ ದೇವಸ್ಥಾನ, ದರ್ಗಾ ಮತ್ತು ಚರ್ಚ್​ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 09, 2023 | 4:59 PM

Share

ಕೊನೆಯಲ್ಲಿ ಅವರು ಚಂದಾವರದ ಸೆಂಟ್ ಜೇವಿಯರ್ ಚರ್ಚ್ ಗೆ ಭೇಟಿ ನೀಡಿದಾಗ ಅಲ್ಲಿನ ಫಾದರ್ ಅವರು ಕುಮಾರಸ್ವಾಮಿ ತಲೆಮೇಲೆ ಕೈಯಿಟ್ಟು ಪ್ರಾರ್ಥಿಸಿದರು

ಕಾರವಾರ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಯಾವ ಧರ್ಮದವರನ್ನೂ (religion) ನಿರಾಶೆಗೊಳಿಸುತ್ತಿಲ್ಲ ಮಾರಾಯ್ರೇ. ಜಿಲ್ಲೆಯ ಚಂದಾವರದಲ್ಲಿ (Chandawara) ಅವರು ಮೊದಲಿಗೆ ಹನುಮಾನ್ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಅದಾದ ಬಳಿಕ ಹಜರತ್ ಮದನ್ ಹಜರತ್ ಉಸ್ಮಾನ್ ಶಾಹ ವಲಿ ದರ್ಗಾಗೆ ಹೋಗಿ ಪ್ರಾರ್ಥನೆ ಮಾಡಿದರು. ಕೊನೆಯಲ್ಲಿ ಅವರು ಚಂದಾವರದ ಸೆಂಟ್ ಜೇವಿಯರ್ ಚರ್ಚ್ ಗೆ ಭೇಟಿ ನೀಡಿದಾಗ ಅಲ್ಲಿನ ಫಾದರ್ ಅವರು ಕುಮಾರಸ್ವಾಮಿ ತಲೆಮೇಲೆ ಕೈಯಿಟ್ಟು ಪ್ರಾರ್ಥಿಸಿದರು. ಪ್ರಾರ್ಥನೆಯ ನಂತರ ಮಾಜಿ ಮುಖ್ಯಮಂತ್ರಿಗಳು ಕೆಥೋಲಿಕ್ ಕ್ರೈಸ್ತ ಸಂಪ್ರದಾಯದ ಹಾಗೆ ಕ್ಯಾಂಡಲ್ ಹಚ್ಚಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 09, 2023 04:58 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.