HD Kumaraswamy: ಹಾಸನ ಜೆಡಿಎಸ್ ಟಿಕೆಟ್ ಯಾರಿಗೆ ಎಂಬ ಬಗ್ಗೆ ಮಾಹಿತಿ ಬಿಟ್ಟುಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಆಯೇಷಾ ಬಾನು

Updated on: Apr 02, 2023 | 3:27 PM

ಕುಟುಂಬದಲ್ಲಿ ಯಾವ್ದೇ ಭಿನ್ನಾಭಿಪ್ರಾಯ ಬಂದ್ರೂ ದೇವೇಗೌಡರು ಸರಿ ಮಾಡ್ತಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

ಹಾಸನ ಟಿಕೆಟ್​ಗಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ(HD Deve Gowda) ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡಿದೆ. ಸದ್ಯ ಈ ಬಗ್ಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ(HD Kumaraswamy), ಇಂದೇ ಹಾಸನ ಕ್ಷೇತ್ರದ ಟಿಕೆಟ್ ಗೊಂದಲ ಬಗೆಹರಿಯಲಿದೆ ಎಂದಿದ್ದಾರೆ. ನಾನು, ಹೆಚ್​ಡಿಡಿ, ಸಿ.ಎಂ.ಇಬ್ರಾಹಿಂ ಚರ್ಚಿಸಿ ತೀರ್ಮಾನ ಮಾಡ್ತೇವೆ. 2ನೇ ಪಟ್ಟಿಯಲ್ಲಿ ಹಾಸನ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ. ಪಂಚರತ್ನ ಕಾರ್ಯಕ್ರಮ ಇರುವ ಹಿನ್ನೆಲೆ ನಾನು ಸಭೆಗೆ ಹೋಗುತ್ತಿಲ್ಲ. ಕಾರ್ಯಕರ್ತನಿಗೆ ಹಾಸನ ಟಿಕೆಟ್ ನೀಡಬೇಕು ಎಂಬ ಒತ್ತಡ ಇದೆ ಎಂದು ಬೆಂಗಳೂರಿನಲ್ಲಿ ಟಿವಿ9ಗೆ ಮಾಜಿ ಸಿಎಂ H.D.ಕುಮಾರಸ್ವಾಮಿ ತಿಳಿಸಿದರು.

Published on: Apr 02, 2023 03:20 PM
Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.