AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಚುನಾವಣಾ ಸಮಯದಲ್ಲಿ ವೈಯಕ್ತಿಕ ಮತ್ತು ಜಾತಿ-ಧರ್ಮಗಳ ಬಗ್ಗೆ ಮಾತಾಡಬಾರದು: ಜಗದೀಶ್ ಶೆಟ್ಟರ್

ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಚುನಾವಣಾ ಸಮಯದಲ್ಲಿ ವೈಯಕ್ತಿಕ ಮತ್ತು ಜಾತಿ-ಧರ್ಮಗಳ ಬಗ್ಗೆ ಮಾತಾಡಬಾರದು: ಜಗದೀಶ್ ಶೆಟ್ಟರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 08, 2023 | 12:31 PM

Share

ಚುನಾವಣಾ ಸಮಯದಲ್ಲಿ ಹೀಗೆ ವೈಯಕ್ತಿಕವಾಗಿ ಟೀಕೆ ಮಾಡುವುದು. ಜಾತಿ-ಧರ್ಮಗಳ ಕುರಿತು ಮಾತಾಡುವುದು ಸರಿಯಲ್ಲ, ಅದರ ಅವಶ್ಯಕತೆಯೂ ಇಲ್ಲ ಎಂದು ಶೆಟ್ಟರ್ ಹೇಳಿದರು.

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರು ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಹುಬ್ಬಳ್ಳಿಯಲ್ಲಿಂದು ಸಲಹೆಯೊಂದನ್ನು ನೀಡಿದರು. ಪ್ರಲ್ಹಾದ್ ಜೋಶಿ-ಬ್ರಾಹ್ಮಣತ್ವ (Pralhad Joshi-Brahmanism) ಬಗ್ಗೆ ಕುಮಾರಸ್ವಾಮಿ ಕಾಮೆಂಟ್ ಮಾಡಿರುವ ಬಗ್ಗೆ ಹುಬ್ಬಳ್ಳಿಯ ಟಿವಿ9 ವರದಿಗಾರ ಪ್ರಶ್ನಿಸಿದಾಗ ಶೆಟ್ಟರ್, ಕುಮಾರಸ್ವಾಮಿ ರಾಜಕೀಯದಲ್ಲಿ ಅಪಾರ ಅನುಭವ ಇರುವಂಥವರು ಮತ್ತು ಎರಡು ಸಲ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಆದರೆ ಚುನಾವಣಾ ಸಮಯದಲ್ಲಿ ಹೀಗೆ ವೈಯಕ್ತಿಕವಾಗಿ ಟೀಕೆ ಮಾಡುವುದು. ಜಾತಿ-ಧರ್ಮಗಳ ಕುರಿತು ಮಾತಾಡುವುದು ಸರಿಯಲ್ಲ, ಅದರ ಅವಶ್ಯಕತೆಯೂ ಇಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 08, 2023 12:28 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.