ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಚುನಾವಣಾ ಸಮಯದಲ್ಲಿ ವೈಯಕ್ತಿಕ ಮತ್ತು ಜಾತಿ-ಧರ್ಮಗಳ ಬಗ್ಗೆ ಮಾತಾಡಬಾರದು: ಜಗದೀಶ್ ಶೆಟ್ಟರ್
ಚುನಾವಣಾ ಸಮಯದಲ್ಲಿ ಹೀಗೆ ವೈಯಕ್ತಿಕವಾಗಿ ಟೀಕೆ ಮಾಡುವುದು. ಜಾತಿ-ಧರ್ಮಗಳ ಕುರಿತು ಮಾತಾಡುವುದು ಸರಿಯಲ್ಲ, ಅದರ ಅವಶ್ಯಕತೆಯೂ ಇಲ್ಲ ಎಂದು ಶೆಟ್ಟರ್ ಹೇಳಿದರು.
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರು ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಹುಬ್ಬಳ್ಳಿಯಲ್ಲಿಂದು ಸಲಹೆಯೊಂದನ್ನು ನೀಡಿದರು. ಪ್ರಲ್ಹಾದ್ ಜೋಶಿ-ಬ್ರಾಹ್ಮಣತ್ವ (Pralhad Joshi-Brahmanism) ಬಗ್ಗೆ ಕುಮಾರಸ್ವಾಮಿ ಕಾಮೆಂಟ್ ಮಾಡಿರುವ ಬಗ್ಗೆ ಹುಬ್ಬಳ್ಳಿಯ ಟಿವಿ9 ವರದಿಗಾರ ಪ್ರಶ್ನಿಸಿದಾಗ ಶೆಟ್ಟರ್, ಕುಮಾರಸ್ವಾಮಿ ರಾಜಕೀಯದಲ್ಲಿ ಅಪಾರ ಅನುಭವ ಇರುವಂಥವರು ಮತ್ತು ಎರಡು ಸಲ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಆದರೆ ಚುನಾವಣಾ ಸಮಯದಲ್ಲಿ ಹೀಗೆ ವೈಯಕ್ತಿಕವಾಗಿ ಟೀಕೆ ಮಾಡುವುದು. ಜಾತಿ-ಧರ್ಮಗಳ ಕುರಿತು ಮಾತಾಡುವುದು ಸರಿಯಲ್ಲ, ಅದರ ಅವಶ್ಯಕತೆಯೂ ಇಲ್ಲ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 08, 2023 12:28 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
