AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಎಂಟಿ ಮತ್ತು ವಿಐಎಸ್​ಎಲ್ ಸಂಸ್ಥೆಗಳನ್ನು ಪುನಶ್ಚೇತನಗೊಳಿಸಲು ಕುಮಾರಸ್ವಾಮಿ ಕಟಿಬದ್ಧರೇ?

ಹೆಚ್​ಎಂಟಿ ಮತ್ತು ವಿಐಎಸ್​ಎಲ್ ಸಂಸ್ಥೆಗಳನ್ನು ಪುನಶ್ಚೇತನಗೊಳಿಸಲು ಕುಮಾರಸ್ವಾಮಿ ಕಟಿಬದ್ಧರೇ?

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 13, 2024 | 5:34 PM

Share

ಬೆಂಗಳೂರಲ್ಲಿರುವ ಹೆಚ್​ಎಂಟಿ ಕಂಪನಿ ಮತ್ತು ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರವನ್ನು (ವಿಐಎಸ್ ಎಲ್) ಪುನಶ್ಚೇತನಗೊಳಿಸುವ ಬಗ್ಗೆ ಕುಮಾರಸ್ವಾಮಿಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ಚರ್ಚೆ ನಡೆಸಿದ್ದಾರಂತೆ. ಇವೆರೆಡು ಪುನರಾರಂಭಗೊಂಡರೆ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗುವುದು ನಿಶ್ಚಿತ.

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ರಾಜ್ಯದಲ್ಲಿ ಮುಚ್ಚಿಹೋಗಿರುವ ಕೆಲ ಖ್ಯಾತ ಸಂಸ್ಥೆಗಳಿಗೆ ಮರುಜೀವ ನೀಡಲು ಸಂಕಲ್ಪ ಮಾಡಿಕೊಂಡಿರುವಂತಿದೆ. ಆವುಗಳಲ್ಲಿ ಹೆಚ್​ಎಂಟಿ ಕೂಡ ಒಂದು. ಇಂದು ಹೆಚ್​ಎಂಟಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಜಾರ್ಖಂಡ್ ರಾಜ್ಯದ ಖಾಂಡ್ವಾ ಸಂಸದರೊಬ್ಬರು ಅವರಿಗೆ ಹೆಚ್​ಎಂಟಿ ಕೈಗಡಿಯಾರಗಳನ್ನು ಉಡುಗೊರೆಯಾಗಿ ನೀಡಿರುವುದನ್ನು ತೋರಿಸಿದರು. ಖಾಂಡ್ವಾದಲ್ಲಿ ಕಾರ್ಖಾನೆಯೊಂದು ಮುಚ್ಚಿ ಹೋಗಿದ್ದು ಅದರಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ನೌಕರರು ಧರಣಿ ನಡೆಸುತ್ತಿದ್ದಾರಂತೆ. ಕುಮಾರಸ್ವಾಮಿಯವರು ಹೆಚ್​ಎಂಟಿ ಕಾರ್ಖಾನೆ ಮುಚ್ಚಿಹೋಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಾರೆ ಮತ್ತು ಅದರ ಬಗ್ಗೆ ಮಾತಾಡುವಾಗ ಭಾವುಕರೂ ಆಗುತ್ತಾರೆ. ಹೆಚ್​ಎಂಟಿ ಕಾರ್ಖಾನೆ ಮುಚ್ಚುವಂತಾಗಲು ಯಾರು ಕಾರಣರೋ ಅಂತ ಜನರಿಗೆ ಗೊತ್ತಿಲ್ಲ, ಅದನ್ನು ತಿಳೀಸುವ ಪ್ರಯತ್ನವನ್ನು ಕುಮಾರಸ್ವಾಮಿ ಮಾಡದೆ ಈಗಿನ ಸರ್ಕಾರವನ್ನು ದೂಷಿಸುತ್ತಾರೆ. ಕಂಪನಿಯು ಸಂಪೂರ್ಣವಾಗಿ ಬಾಗಿಲು ಹಾಕಿದ್ದು 2016ರಲ್ಲ. 2018ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರು, ಆಗ ಅವರಿಗೆ ಹೆಚ್​ಎಂಟಿ ಕಂಪನಿಯನ್ನು ಪುನಶ್ಚೇತನಗೊಳಿಸುವ ಇಚ್ಛೆ ಹುಟ್ಟಿಕೊಳ್ಳಲಿಲ್ಲವೇ ಅನ್ನೋದು ಕನ್ನಡಿಗರ ಪ್ರಶ್ನೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿದ್ದರಾಮಯ್ಯ ಮತ್ತು ಹೆಚ್ ಡಿ ಕುಮಾರಸ್ವಾಮಿ ಪರಸ್ಪರ ಎದುರಾದ ಸಂದರ್ಭ ಹೇಗಿತ್ತು ಗೊತ್ತಾ?

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.