ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಡಿಕೆ ಶಿವಕುಮಾರ್​ ವಿರುದ್ಧ ಕುಮಾರಸ್ವಾಮಿ ಕಿಡಿ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 06, 2024 | 1:23 PM

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದ ಹಲವೆಡೆ ಅವಾಂತರ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಈ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಎಲ್ಲ ವಿಚಾರಗಳಲ್ಲೂ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರು, ಅಕ್ಟೋಬರ್​ 06: ನಗರದಲ್ಲಿ ರಾತ್ರಿ ಸುರಿದ ಮಳೆಯಿಂದ ಹಲವೆಡೆ ಅವಾಂತರಗಳು ಸಂಭವಿಸಿವೆ. ಅಕ್ಷರಶಃ ಜನರು ತತ್ತರಿಸಿದ್ದಾರೆ. ಈ ವಿಚಾರವಾಗಿ ನಗರದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದು, ಈ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಎಲ್ಲ ವಿಚಾರಗಳಲ್ಲೂ ಸರ್ಕಾರ ವಿಫಲವಾಗಿದೆ. ಮಳೆಯಿಂದಾಗಿ ಹಲವು ಮನೆಗಳು ಜಲಾವೃತಗೊಂಡಿವೆ. ರಾತ್ರಿ ಎಲ್ಲ ನಿದ್ದೆ ಇಲ್ಲದೆ ಜನರು ಪರದಾಟ ನಡೆಸಿದ್ದಾರೆ. ಗುಂಡಿ ಮುಚ್ಚಲು ಅದೇನೋ ಗಡುವು ನೀಡಿದ್ದಾರಲ್ಲ. ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ. ಜನರ ಸಮಸ್ಯೆಗಳ ಬಗ್ಗೆ ಈ ಸರ್ಕಾರ ಚಿಂತೆಯೇ ಇಲ್ಲ. ಇನ್ನು ಅಭಿವೃದ್ಧಿ ಕೆಲಸಗಳ ವಿಚಾರದಲ್ಲಿ ದೇವರೇ ಕಾಪಾಡಬೇಕು ಎಂದು ತಿರುಗೇಟು ನೀಡಿದ್ದಾರೆ.

ಕೊಟ್ಟ ಕುದುರೆ ಏರಲಾರದ ಹೆಚ್.ಡಿ. ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ ಎಂದು ಹೇಳುತ್ತಿದ್ದಾರೆ. ಯಾವ ಕುದುರೆ ಕೊಟ್ಟಿದ್ದರು. ನಾನು ಸಿಎಂ ಆಗಿದ್ದಾಗ 14 ತಿಂಗಳು ಮಾಡಿದ್ದ ಕೆಲಸವನ್ನು ಈ 15 ತಿಂಗಳಲ್ಲಿ ಸ್ವಂತ ಸರ್ಕಾರವನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂದು ಸವಾಲು ಹಾಕಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.    

Follow us on