ಕೇಂದ್ರವನ್ನು ಟೀಕಿಸಿದ್ದ ಕಾಂಗ್ರೆಸ್​ ಈಗ ಬೆಲೆ ಏರಿಕೆ ಮಾಡಿದ್ಯಾಕೆ? ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ

Edited By:

Updated on: Jun 15, 2024 | 10:56 PM

ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಪೆಟ್ರೋಲ್ ಹಾಗೂ ಡೀಸೆಲ್​ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ತೈಲ ಬೆಲೆ ಏರಿಕೆಯಿಂದ ಟ್ರಾನ್ಸ್​ಪೋರ್ಟ್​ಗೆ ಹೊಡೆತ ಬೀಳುತ್ತೆ. ಬಡವರು, ರೈತರಿಗೆ ತೊಂದರೆ ಆಗುತ್ತದೆ. ಎಷ್ಟು ದಿನ ಈ ಆಟ ಆಡುತ್ತಾರೋ ಎಂದು ಕಿಡಿಕಾರಿದ್ದಾರೆ.

ಮಂಡ್ಯ, ಜೂನ್​ 15: ರಾಜ್ಯ ಕಾಂಗ್ರೆಸ್ ಸರ್ಕಾರ ಮದ್ಯದ ದರ ಏರಿಕೆ ಮಾಡಿದ್ದಾಯ್ತು, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಾಳ ಮಾಡಿದ್ದಾಯ್ತು, 5 ಗ್ಯಾರಂಟಿ ಯೋಜನೆಗಾಗಿ ತೈಲ ದರ ಹೆಚ್ಚಳ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯಿಂದ ಟ್ರಾನ್ಸ್​ಪೋರ್ಟ್​ಗೆ ಹೊಡೆತ ಬೀಳುತ್ತೆ. ಬಡವರು, ರೈತರಿಗೆ ತೊಂದರೆ ಆಗುತ್ತದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟು ಹಣ ದೋಚಿದ್ದಾರೋ? ಎಷ್ಟು ದಿನ ಈ ಆಟ ಆಡುತ್ತಾರೋ. ಈ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ. ರೈತರಿಗೆ ತೊಂದರೆ ಆಗುತ್ತೆ. ಬಡವರ ಕಿಸೆಗೆ ಕೈ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Jun 15, 2024 10:52 PM
Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More