ಸಕ್ಕರೆ ನಾಡಲ್ಲಿ ಪ್ರತಿಮೆ ಪಾಲಿಟಿಕ್ಸ್; ಶಿವಕುಮಾರ ಸ್ವಾಮೀಜಿ ಪುತ್ಥಳಿ ಬೆನ್ನಲ್ಲೇ ಹೆಚ್​ಡಿಕೆಯಿಂದ ಬಸವಣ್ಣನ ಪುತ್ಥಳಿ ಅನಾವರಣ

ಆಯೇಷಾ ಬಾನು

Updated on: Mar 19, 2023 | 10:23 AM

ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಚಳ್ಳಿ ಗ್ರಾಮದಲ್ಲಿಂದು ಜೆಡಿಎಸ್​ನಿಂದ ಬಸವಣ್ಣನ ಪುತ್ಥಳಿ ಅನಾವರಣಗೊಳಿಸಲಾಗುತ್ತಿದೆ.

ಮಂಡ್ಯ: ಜಿಲ್ಲೆಯಲ್ಲಿ ಲಿಂಗಾಯತರ ಮತ ಸೆಳೆಯಲು ಪ್ರತಿಮೆ ಪಾಲಿಟಿಕ್ಸ್ ಜೋರಾಗಿದೆ. ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಚಳ್ಳಿ ಗ್ರಾಮದಲ್ಲಿಂದು ಜೆಡಿಎಸ್​ನಿಂದ ಬಸವಣ್ಣನ ಪುತ್ಥಳಿ ಅನಾವರಣಗೊಳಿಸಲಾಗುತ್ತಿದೆ. 20 ದಿನದ ಹಿಂದೆ ಶಿವಕುಮಾರ ಸ್ವಾಮೀಜಿ ಪುತ್ಥಳಿ ಅನಾವರಣ ಆಗಿತ್ತು. ಇದರ ಬೆನ್ನಲ್ಲೇ ಬಸವಣ್ಣನ ಪುತ್ಥಳಿ ಅನಾವರಣಗೊಳಿಸಲಾಗುತ್ತಿದೆ. ಬಿಜೆಪಿ ಸಂಭಾವ್ಯ ಅಭ್ಯರ್ಥಿ ಡಾ.ಇಂದ್ರೇಶ್​ ನಿರ್ಮಾಣ ಮಾಡಿಸಿದ್ದ ಪುತ್ಥಳಿ ಶಿವಕುಮಾರ ಸ್ವಾಮೀಜಿ ಪುತ್ಥಳಿಯನ್ನು ವಿಜಯೇಂದ್ರ ಉದ್ಘಾಟಿಸಿದ್ದರು. ಇಂದು ಹೆಚ್​ಡಿ ಕುಮಾರಸ್ವಾಮಿ ಬಸವಣ್ಣನ ಪುತ್ಥಳಿ ಅನಾವರಣ ಮಾಡಲಿದ್ದಾರೆ.

Published on: Mar 19, 2023 10:23 AM
Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.