ಅಲ್ಲೋಲ ಕಲ್ಲೋಲ ಹೇಳಿಕೆ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಹೆಚ್​​.ಡಿ. ಕುಮಾರಸ್ವಾಮಿ: ಕೇಂದ್ರ ಸಚಿವ ಹೇಳಿದ್ದಿಷ್ಟು

Edited By:

Updated on: Sep 15, 2026 | 1:27 PM

ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸರ್ಕಾರದ ವಿರುದ್ಧ ಹಲವು ಅಕ್ರಮಗಳ ಆರೋಪ ಮಾಡಿದ್ದಾರೆ. ಕೆಪಿಎಸ್‌ಸಿ ಮತ್ತು ಎಇ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳನ್ನು ಉಲ್ಲೇಖಿಸಿ, ಈ ಬಗ್ಗೆ ದಾಖಲೆಗಳನ್ನು ಜನತೆಯ ಮುಂದಿಡುತ್ತೇನೆ ಎಂದಿದ್ದಾರೆ. ತಮ್ಮ ಟೀಕೆ ಯಾವುದೇ ವೈಯಕ್ತಿಕ ದ್ವೇಷ ಅಥವಾ ಜಾತಿ ಆಧಾರಿತವಲ್ಲ, ಬದಲಿಗೆ ರಾಜ್ಯದ ಹಿತಕ್ಕಾಗಿ ಎಂದು ಸ್ಪಷ್ಟಪಡಿಸಿದ್ದಾರೆ.

ಹಾಸನ, ಸೆಪ್ಟೆಂಬರ್​​ 15: ದೇಶವೇ ಅಲ್ಲೋಲ ಕಲ್ಲೋಲ ಆಗುವ ರೀತಿಯ ಸುದ್ದಿ ಕೊಡುತ್ತೇನೆ ಎಂಬ ತಮ್ಮ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ, ಈಗಲೂ ತಮ್ಮ ಮಾತಿಗೆ ಬದ್ಧರಾಗಿರೋದಾಗಿ ಪುನರುಚ್ಛರಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ. ಈಗಿರುವ ಸರ್ಕಾರದ ಮಂತ್ರಿಗಳ ಅಡಿಯೇ ಕೆಪಿಎಸ್​​ಸಿ, ಎಇಇ ಹಗರಣಗಳು ನಡೆದಿವೆ. ಲಕ್ಷಾಂತರ ಯುವಕರ ಭಾವನೆಗಳನ್ನು ಮಾರಾಟಕ್ಕಿಟ್ಟು ವಸೂಲಿ ಮಾಡಲಾಗಿದೆ. ಇದ್ಯಾವುದನ್ನೂ ನಾನು ಹೇಳುತ್ತಿಲ್ಲ. ದಾಖಲೆಗಳು ಹೇಳುತ್ತಿವೆ. ಅಕ್ರಮಗಳನ್ನ ಜನರ ಮುಂದಿಡುವುದು ನನ್ನ ಜವಾಬ್ದಾರಿ. ತೀರ್ಮಾನ ಜನರದ್ದು ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us