ಮಗನನ್ನು ನೋಡಲು ಜೈಲಿಗೆ ಬಂದ ಹೆಚ್ ಡಿ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!

ಮಗನನ್ನು ನೋಡಲು ಜೈಲಿಗೆ ಬಂದ ಹೆಚ್ ಡಿ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
|

Updated on: Jul 03, 2024 | 5:18 PM

ರೇವಣ್ಣನ ವ್ಯಥೆ, ನೋವು, ಸಂಕಟ ಎಲ್ಲವೂ ಕನ್ನಡಿಗರಿಗೆ ಅರ್ಥವಾಗುತ್ತದೆ, ಇಲ್ಲ ಅಂತೇನಿಲ್ಲ. ತನ್ನ ಇಬ್ಬರೂ ಮಕ್ಕಳು ಲೈಂಗಿಕ ಅಪರಾಧಗಳ ಆರೋಪದಲ್ಲಿ ಜೈಲು ಸೇರಿದರೆ ಯಾವ ತಂದೆ ತಾನೆ ಸಮಾಧಾನದಿಂದ ಇದ್ದಾನು? ರೇವಣ್ಣ ಸಹ ಮಹಿಳೆಯೊಬ್ಬರ ಅಪಹರಣ ಮತ್ತು ಇನ್ನೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಅರೋಪಗಳಲ್ಲಿ ಜಾಮೀನು ಪಡೆದು ಜೈಲುವಾಸ ತಪ್ಪಿಸಿಕೊಂಡಿದ್ದಾರೆ.

ಆನೇಕಲ್(ಬೆಂಗಳೂರು): ರಾಜಕಾರಣಿಗಳ ಪ್ರವೃತ್ತಿ ನೋಡಿ ಹೇಗಿದೆ? ತಮಗೆ ಬೇಕಾದಾಗ ಅವರು ಮಾಧ್ಯಮದ ಕೆಮೆರಾಗಳ ಮುಂದೆ ಬಿನಾಕಾ ಸ್ಮೈಲ್ ನೀಡುತ್ತಾ ನಿಲ್ಲುತ್ತಾರೆ. ಬೇಡವಾದಾಗ ಯಾಕ್ರಯ್ಯ ನಮ್ಮ ದುಂಬಾಲು ಬೀಳ್ತೀರಾ? ಅಂತ ಗದರುತ್ತಾರೆ. ಸೋಮವಾರ ಮೈಸೂರಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಾಸಕ ಹೆಚ್ ಡಿ ರೇವಣ್ಣ ನಗುತ್ತ ಆತ್ಮೀಯತೆಯಿಂದ ಕೇಳಿದ ಪ್ರಶ್ನೆಗಳಿಗೆ ಶಾಂತಚಿತ್ತರಾಗಿ ಉತ್ತರಿಸಿದರು. ನಿಮ್ಮ ಪತ್ನಿ ಭವಾನಿ, ಪ್ರಜ್ವಲ್ ರೇವಣ್ಣರನ್ನು ನೋಡಲು ಬೆಂಗಳೂರಿನ ಸೆಂಟ್ರಲ್ ಜೈಲಿಗೆ ಹೋಗಿದ್ದಾರೆ ನೀವು ಮೈಸೂರಲ್ಲೀದ್ದೀರಲ್ಲ ಸರ್ ಅಂತ ಕೇಳಿದರೆ, ಅವರದ್ದು ಹೆತ್ತ ಕರಳು ಮಗನನ್ನು ನೋಡಬೇಕಿಸುತ್ತದೆ, ಹೋಗಿದ್ದಾರೆ, ನಾನು ಎಲ್ಲ ಭಾರವನ್ನು ದೇವರ ಮೇಲೆ ಹಾಕಿದ್ದೇನೆ ಎಂದಿದ್ದರು. ಆದರೆ ಇವತ್ತು ಖುದ್ದು ಅವರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರೀಯ ಕಾರಾಗೃಹಕ್ಕೆ ಬಂದಿದ್ದರು. ಅವರನ್ನು ಕಂಡ ಮಾಧ್ಯಮದವರು ಮಾತಾಡಿಸಲು ಹೋದಾಗ ಅವರು ಗದರಿದರು. ಯಾಕೆ ಸ್ವಾಮಿ? ನಿಮ್ಮ ಮನಸ್ಸಿಗೆ ಬಂದಾಗ ಮಾತಾಡ್ತೀರಿ ಬೇಡವಾದಾಗ ಗದರುತ್ತೀರಾ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ಹೆಚ್ ಡಿ ರೇವಣ್ಣ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ