ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಹೆಚ್ ಡಿ ರೇವಣ್ಣ ನೇರವಾಗಿ ತಂದೆಯ ಮನೆಗೆ ಹೋದರು!

ಬಂಧನವಾಗುವ ಮೊದಲು ಅವರು ಹೆಚ್ ಡಿ ದೇವೇಗೌಡರ ಮನೆಯಲ್ಲಿದ್ದರು, ಜೈಲಿಂದ ಬಿಡುಗಡೆ ಹೊಂದಿದ ಬಳಿಕ ನೇರವಾಗಿ ದೊಡ್ಡಗೌಡರ ಮನೆಗೆ ಹೋಗಿದ್ದರು ಮತ್ತು ಇವತ್ತು ಮಗ ವಾಪಸ್ಸು ಬಂದಿರುವ ಹಿನ್ನೆಲೆಯಲ್ಲಿ ಅವರು ಜೆಪಿ ನಗರದಲ್ಲಿರುವ ಕೆಲ ದೇವಸ್ಥಾನಗಳಿಗೆ ಭೇಟಿ ನೀಡಿದ ಬಳಿಕ ತಂದೆಯ ಮನೆಗೆ ಆಗಮಿಸಿದರು.

ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಹೆಚ್ ಡಿ ರೇವಣ್ಣ ನೇರವಾಗಿ ತಂದೆಯ ಮನೆಗೆ ಹೋದರು!
|

Updated on: May 31, 2024 | 1:56 PM

ಬೆಂಗಳೂರು: ಮಾನವನ ಸ್ವಭಾವವೇ ಹಾಗೆ, ಕಷ್ಟಬಂದಾಗ ದೇವರ ಮೊರೆ ಹೋಗುತ್ತಾನೆ. ಭಾರತೀಯರೆಲ್ಲ ಧಾರ್ಮಿಕ ಮನೋಭಾವದವರು. ವಿಚಾರವಾದಿ, ನಾಸ್ತಿಕ ಎಂದು ಹೇಳಿಕೊಳ್ಳುವ ಜನ ಸಹ ಒಂದಿಲ್ಲೊಂದು ಸಂದರ್ಭದಲ್ಲಿ ದೇವರನ್ನು ನೆನೆಯುತ್ತಾರೆ. ಹೆಚ್ ಡಿ ರೇವಣ್ಣ (HD Revanna) ವಿಷಯದಲ್ಲಿ ಇದನ್ನೆಲ್ಲ ಹೇಳಬೇಕಾಗಿದೆ. ಅವರು ಪರಮ ದೈವಭಕ್ತರೆಂದು ಕನ್ನಡಿಗರಿಗೆಲ್ಲ ಗೊತ್ತು. ಅವರಿಗೀಗ ಸಂಕಷ್ಟಗಳ ಸರಮಾಲೆ ಎದುರಾಗಿದೆ. ನಿನ್ನೆ ರಾತ್ರಿ ಅವರ ಮಗ ಮತ್ತು ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸ್ವದೇಶಕ್ಕೆ ವಾಪಸ್ಸಾಗಿದ್ದಾರೆ ಮತ್ತು ಅವರನ್ನು ಎಸ್ಐಟಿ (SIT) ವಶಕ್ಕೆ ಪಡೆದುಕೊಂಡಿದೆ. ನಾವು ಆಗಲೇ ವರದಿ ಮಾಡಿದ ಹಾಗೆ, ಇವತ್ತು ಬೆಳಗ್ಗೆಯಿಂದ ರೇವಣ್ಣ ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸುತ್ತಿದ್ದಾರೆ. ಕಷ್ಟ ಬಂದಾಗ ಜನ ದೇವರನ್ನು ಪ್ರಾರ್ಥಿಸಿಕೊಳ್ಳುವುದರ ಜೊತೆಗೆ, ತಮಗೆ ಅತ್ಯಂತ ಆಪ್ತರಾದವರ ಜೊತೆ ಕಷ್ಟವನ್ನು ಹೇಳಿಕೊಂಡು ಮನಸ್ಸು ಹಗುರ ಮಾಡಿಕೊಳ್ಳುತ್ತಾರೆ. ರೇವಣ್ಣ ತಮ್ಮ ತಂದೆಯಲ್ಲಿ ಅಂಥ ಒಬ್ಬ ವ್ಯಕ್ತಿಯನ್ನು ಕಂಡುಕೊಂಡಿದ್ದಾರೆ. ಬಂಧನವಾಗುವ ಮೊದಲು ಅವರು ಹೆಚ್ ಡಿ ದೇವೇಗೌಡರ (HD Devegowda) ಮನೆಯಲ್ಲಿದ್ದರು, ಜೈಲಿಂದ ಬಿಡುಗಡೆ ಹೊಂದಿದ ಬಳಿಕ ನೇರವಾಗಿ ದೊಡ್ಡಗೌಡರ ಮನೆಗೆ ಹೋಗಿದ್ದರು ಮತ್ತು ಇವತ್ತು ಮಗ ವಾಪಸ್ಸು ಬಂದಿರುವ ಹಿನ್ನೆಲೆಯಲ್ಲಿ ಅವರು ಜೆಪಿ ನಗರದಲ್ಲಿರುವ ಕೆಲ ದೇವಸ್ಥಾನಗಳಿಗೆ ಭೇಟಿ ನೀಡಿದ ಬಳಿಕ ತಂದೆಯ ಮನೆಗೆ ಆಗಮಿಸಿದರು. ಅವರೊಂದಿಗೆ ಮಾತಾಡುತ್ತಾ ಅವರು ಮನಸ್ಸಿಗೆ ಸಮಾಧಾನ ತಂದುಕೊಳ್ಳುವಂತಿದೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನನ್ನ ಕುಟುಂಬವೇ ಬೇರೆ, ಹೆಚ್ ಡಿ ರೇವಣ್ಣ ಕುಟುಂಬವೇ ಬೇರೆ, ನಮ್ಮ ವ್ಯವಹಾರಗಳೂ ಬೇರೆ ಬೇರೆ: ಹೆಚ್ ಡಿ ಕುಮಾರಸ್ವಾಮಿ

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ